Sunday, August 23, 2026

BDA Apartments

Home Front Page ಕೆರೆಗಳಿಗೆ ಎರಡು ತಿಂಗಳೊಳಗೆ ಕಾಯಕಲ್ಪ ನೀಡಿ- ಅಧಿಕಾರಿಗಳಿಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸೂಚನೆ..

ಕೆರೆಗಳಿಗೆ ಎರಡು ತಿಂಗಳೊಳಗೆ ಕಾಯಕಲ್ಪ ನೀಡಿ- ಅಧಿಕಾರಿಗಳಿಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸೂಚನೆ..

ಮೈಸೂರು, ಫೆಬ್ರವರಿ,3,2021(www.justkannada.in): ಕೇರ್ಗಳ್ಳಿ ಕೆರೆ, ದಟ್ಟಗಳ್ಳಿ ಸಮೀಪದ ಅಯ್ಯಜ್ಜನಹುಂಡಿ ಕೆರೆ ಮತ್ತು ಅವುಗಳಿಗೆ ಹೊಂದಿಕೊಂಡಂತಿರುವ ಕೆರೆಗಳಿಗೆ ಎರಡು ತಿಂಗಳೊಳಗಾಗಿ ಕಾಯಕಲ್ಪ ನೀಡಿ, ಕೆರೆ ಸ್ವರೂಪದಲ್ಲಿ ಕಾಣುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಅಯ್ಯಜ್ಜನಹುಂಡಿ ಕೆರೆ ಸೇರಿದಂತೆ ವಿವಿಧ ಕೆರೆಗಳಿಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೇಟಿ ನೀಡಿ ಪರಿಶೀಲಿಸಿದರು.jk

ಈ ಕೆರೆಗಳಿಗೆ ಕಾಯಕಲ್ಪ ನೀಡುವ ಸಂಬಂಧ ಮುಡಾ, ಮಹಾನಗರ ಪಾಲಿಕೆ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕೆಲಸ ವಹಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆರಗಳ್ಳಿ ಕೆರೆಯಲ್ಲಿ ಮೆಕ್ಕಲು ತೆಗೆಯಬೇಕು, ಬೇಲಿ ಹಾಕಬೇಕು. ಚರಂಡಿ ನೀರು ಒಳಚರಂಡಿಯ ಮೂಲಕವೇ ಹರಿಯುವಂತೆ ಸಂಪರ್ಕ ಮಾಡುವಂತೆ ತಿಳಿಸಿದರು.

ಅಯ್ಯಜನಗುಂಡಿ ಕೆರೆಯ ಕಾಯಕಲ್ಪ ಕೆಲಸವನ್ನು ಮಹಾನಗರ ಪಾಲಿಕೆ ವತಿಯಿಂದ ಮಾಡುವಂತೆ  ಸೂಚಿಸಿದರು. ಈ ಕೆರೆಗಳಿಗೆ ಬದು ನಿರ್ಮಾಣ ಮಾಡಿ, ನೀರು ತುಂಬಿಸುವ ಕೆಲಸವನ್ನು ಸಣ್ಣ ನೀರಾವರಿ ಇಲಾಖೆ ಮಾಡುವಂತೆ ತಿಳಿಸಿದರು. ಈ ಕೆರೆಗಳ ಸಮೀಪ ಕಟ್ಟೆ ತ್ಯಾಜ್ಯವನ್ನು ಯಾರೂ ಹಾಕಬಾರದು ಎಂಬ ಫಲಕವನ್ನು ಮಹಾನಗರ ಪಾಲಿಕೆ ಅಳವಡಿಸಬೇಕು. ತ್ಯಾಜ್ಯ ಹಾಕುವವರಿಗೆ ದಂಡ ವಿಧಿಸಬೇಕು ಎಂದು ಡಿಸಿ ರೋಹಿಣಿ ಸಿಂಧೂರಿ ಹೇಳಿದರು.lakes-within-two-months-mysore-dc-rohini-sindhuri-order-officers

ಈ ಸಂದರ್ಭದಲ್ಲಿ ಮುಡಾ ಆಯುಕ್ತ ಡಿ ಬಿ ನಟೇಶ್, ಅಧೀಕ್ಷಕ ಇಂಜಿನಿಯರ್ ಶಂಕರ್, ಮಹಾನಗರ ಪಾಲಿಕೆ ವಲಯ ಅಧೀಕ್ಷಕ ಇಂಜಿನಿಯರ್ ಬಿಳಿಗಿರಿರಂಗಸ್ವಾಮಿ, ತಹಶೀಲ್ದಾರ್ ರಕ್ಷಿತ್, ಸತ್ಯಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Key words: lakes –within- two months- Mysore DC -Rohini Sindhuri –order- Officers