ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ಈ ಭ್ರಷ್ಟ ಸರ್ಕಾರ ಕಿತ್ತೆಸೆಯಲಿ- ಮಾಜಿ ಸಚಿವ ಅಶ‍್ವಥ್ ನಾರಾಯಣ್.

ಬೆಂಗಳೂರು,ಜುಲೈ,22,2023(www.justkannadain):  ಸಿಎಂ ಸಿದ್ಧರಾಮಯ್ಯ ವಿರುದ್ಧ ಎಂಎಲ್ ಸಿ ಹರಿಪ್ರಸಾದ್ ಪರೋಕ್ಷ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಅಶ್ವಥ್ ನಾರಾಯಣ್, ಸಿಎಂ ಕಿತ್ತೆಸೆಯುವ ಕೆಲಸವನ್ನ ಮಾಡಿದರೆ ಒಳ್ಳೆಯದು. ಈ ಭ್ರಷ್ಟ ಸರ್ಕಾರವನ್ನ ಕಿತ್ತೆಸೆಯಲಿ ಎಂದು ಗುಡುಗಿದರು.

ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ  ಅಶ್ವಥ್ ನಾರಾಯಣ್, ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜವಿರೋಧಿ ಶಕ್ತಿಗಳು ತಲೆ ಎತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಟಿ.ನರಸೀಪುರದಲ್ಲಿ ಸಮಾಜದ್ರೋಹಿಗಳಿಂದ ವೇಣುಗೋಪಾಲ್ ಹತ್ಯೆಯಾಯಿತು.  ಹಲವು ಕಡೆ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕಾಂಗ್ರೆಸ್​ ವಿರುದ್ದ ಕಿಡಿಕಾರಿದರು.

ಪಿಎಸ್ ಐ ನೇಮಕಾತಿ ಹಗರಣ ತನಿಖೆ ಮಾಡಲಿ.  ಪ್ರಕರಣದ ಪಾರದರ್ಶಕ ತನಿಖೆಯಾಗಲಿ.  ಸಿದ್ಧರಾಮಯ್ಯ ಅವಧಿಯ ಪಿಎಸ್ ಐ ಅಕ್ರಮವನ್ನೂ ತನಿಖೆ ಮಾಡಲಿ ಎಂದು ಅಶ್ವಥ್ ನಾರಾಯಣ್ ಆಗ್ರಹಿಸಿದರು.

Key words: Law and order – state – completely –collapsed-Former minister -Ashwayath Narayan.