ಮೋದಿ ಪ್ರಧಾನಿ ಆದ್ರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ರು: ಹೆಚ್.ಡಿಕೆ ಕುಟುಕಿದ ಸಚಿವ ಡಾ. ಎಂ.ಸಿ ಸುಧಾಕರ್.

ಮೈಸೂರು,ಅಕ್ಟೋಬರ್,18,2023(www.justkannada.in): ಮೋದಿ ಪ್ರಧಾನಿ ಆದರೇ ದೇಶ ಬಿಟ್ಟು ಹೋಗುತ್ತೇನೆ ಅಂದಿದ್ರು. ಇದೀಗ ಅವರೇ ಪದೇಪದೇ ಹೋಗಿ ಮೋದಿಯವರನ್ನ ಭೇಟಿ  ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಟಾಂಗ್ ಕೊಟ್ಟರು.

ಸರ್ಕಾರದ ವಿರುದ್ಧ ವೈಎಸ್ಟಿ, ಎಸ್ಎಸ್ಟಿ ಟ್ಯಾಕ್ಸ್ ಎಂಬ ಹೆಚ್ ಡಿ ಕುಮಾರಸ್ವಾಮಿ ಆರೋಪ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಚಿವ ಎಂ.ಸಿ ಸುಧಾಕರ್, ವೈಯಕ್ತಿಕವಾಗಿ ಕುಮಾರಸ್ವಾಮಿ ಅವರ ಬಗ್ಗೆ ಬಹಳ ಗೌರವ ಇದೆ. ನಾವು ಹೆಚ್ ಡಿಕೆ ಟ್ಯಾಕ್ಸ್ ಅಂತ ಹೆಸರು ಕೊಡಬಹುದು. ಅವರ ರಾಜಕೀಯ ನಡೆ ಬಗ್ಗೆ ಜನರಿಗೆ ಗೊತ್ತಿದೆ. ಹಳೇ ಮೈಸೂರು ಭಾಗದಲ್ಲಿ ಅವರ ಅವಕಾಶದವಾದಿ ರಾಜಕಾರಣ ಎಲ್ಲರಿಗೂ ಗೊತ್ತಿದೆ. ರಾಜ್ಯಾಧ್ಯಕ್ಷರನ್ನ ಬಿಟ್ಟು ಕುಟುಂಬ ರಾಜಕಾರಣ ಮಾಡ್ತಾರೆ. ಇಂತವರು ಕಾಂಗ್ರೆಸ್ ಬಗ್ಗೆ ಆರೋಪ ಮಾಡ್ತಾರೆ ಎಂದು ಕಿಡಿಕಾರಿದರು.

ಮೋದಿಯವರ ಮುಖ ನೋಡಿ ಯಾರೂ ಓಟ್ ಹಾಕ್ತಿಲ್ಲ.

ರಾಜ್ಯದಲ್ಲಿ ಐಟಿ ದಾಳಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಸಿ ಸುಧಾಕರ್, ಬಿಜೆಪಿಯವರು ಹತಾಶರಾಗಿದ್ದಾರೆ. ಅವರಿಗೆ ಗಾಯದ ಮೇಲೆ ಉಪ್ಪು ಸುರಿದ ಹಾಗೆ ಆಗಿದೆ. ರಾಜ್ಯದಲ್ಲಿ ಮೋದಿ ಪರವಾದ ಅಲೆ ಇಲ್ಲ. ಮೋದಿಯವರ ಮುಖ ನೋಡಿ ಯಾರೂ ಓಟ್ ಹಾಕ್ತಿಲ್ಲ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ನ ಗ್ಯಾರಂಟಿಗಳು ಜನಮನ್ನಣೆ ಗಳಿಸಿವೆ. ಈಗಾಗಲೇ ನಾಲ್ಕು ಗ್ಯಾರಂಟಿಗಳು ಜನರನ್ನ ತಲುಪುತ್ತಿವೆ. ಇದು ಬಿಜಪಿಯವರ ನಿದ್ದೆ ಕೆಡಿಸಿದೆ. ಹಾಗಾಗಿ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಬಿಜೆಪಿ ಕಳೆದ ಹಲವು ವರ್ಷಗಳಿಂದ ಪ್ರಬಲವಾಗಿರುವವರ ಮೇಲೆ ದಾಳಿ‌ ಮಾಡುತ್ತಿದೆ. ಐಟಿ, ಇಡಿ ಮೂಲಕ ಪ್ರತಿ ಪಕ್ಷಗಳ ಹತ್ತಿಕ್ಕುವ ಕೆಲಸ ಆಗುತ್ತಿದೆ. ಜಾರಿ ನಿರ್ದೇಶನಾಲಯದ ಸಂಸ್ಥೆಗಳನ್ನ ತಮ್ಮ ಅಣತೆಯಂತೆ ಬಳಸಿಕೊಳ್ತಿದ್ದಾರೆ. ಸುಖಾ ಸುಮ್ಮನೆ ಗೊಂದಲ ಸೃಷ್ಠಿ  ಮಾಡುತ್ತಿದ್ದಾರೆ ಎಂದು ಸಚಿವ ಡಾ.ಎಂ.ಸುಧಾಕರ್ ವಾಗ್ದಾಳಿ ನಡೆಸಿದರು.

Key words: leave – country -if -Modi –became-PM- HDK -Minister -Dr. MC Sudhakar