Monday, August 3, 2026

BDA Apartments

Home Front Page ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ

ಮೈಸೂರು,ಜನವರಿ,31,2026 (www.justkannada.in): ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹದೇವಸ್ವಾಮಿ ಎಂಬುವವರು ತನ್ನ ಪತ್ನಿ ಮಗುವಿನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ದಂಪತಿ ಮಗು ಬೈಕ್ ನಿಂದ ಕೆಳಗೆ ಬಿದ್ದಿದ್ದು ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ತಗಡೂರು ಸರ್ಕಾರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು  ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Key words: Leopard, attacks, couple, child, bike, Mysore