ಬೆಂಗಳೂರು,ಜುಲೈ,6,2026 (www.justkannada.in): ಬೆಂಗಳೂರಿನ ನೈಸ್ ರೋಡ್ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕಕ ಶುರುವಾಗಿದೆ.
ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಾರತಿನಗರದ 2ನೇ ಹಂತದಲ್ಲಿ ಚಿರತೆ ಕಾಣಸಿಕೊಂಡಿತ್ತು. ಕ್ಷಿಪ್ರ ಗಣಪತಿ ದೇವಾಲಯದ ಬಳಿ ಚಿರತೆ ಪ್ರತ್ಯಕವಾಗಿತ್ತು ಚಿರತ ರಸ್ತೆ ದಾಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಚಿರತೆಯ ಚಲನವಲನದ ಮಾಹಿತಿ ಸಿಕ್ಕ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಬೋನುಗಳನ್ನು ಅಳವಡಿಸುವುದು ಹಾಗೂ ನಿಗಾ ತಂಡಗಳನ್ನು ನಿಯೋಜಿಸುವ ಕಾರ್ಯ ನಡೆಯುತ್ತಿದೆ.
ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ನಿಗಾ ವಹಿಸಿದ್ದು, ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವವರೆಗೆ ಕಾರ್ಯಾಚರಣೆ ನಡೆಯುತ್ತಿದೆ.
Key words: Leopard, Bengaluru, Forest, Officer, local residents






