ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಕಡ್ಡಾಯ: ಏ.30 ಕೊನೆಯ ದಿನ

ಬೆಂಗಳೂರು ಗ್ರಾಮಾಂತರ, ಏಪ್ರಿಲ್ ,1,2024 (www.justkannada.in): ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಕಡ್ಡಾಯವಾಗಿದ್ದು, ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಕೆಗೆ ಏಪ್ರಿಲ್ 30 ಕೊನೆಯ ದಿನವಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು 2024-25 ನೇ ಸಾಲಿನ ಜೀವಿತಾವಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಬೇಕು.

ನಿಗಧಿತ ಅರ್ಜಿ ನಮೂನೆಯನ್ನು 2024ನೇ ಏಪ್ರಿಲ್-30ರೊಳಗಾಗಿ ತಪ್ಪದೇ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ, 114 ಚಪ್ಪರದಕಲ್ಲು, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಜೀವಿತಾವಧಿ ಪ್ರಮಾಣ ಪತ್ರ ಹಾಗೂ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ(P.P.O) ಆದೇಶದ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ.ಜಾ/ಪ.ಪಂ ಕಲಾವಿದರು ಕಡ್ಡಾಯವಾಗಿ ಆರ್.ಡಿ ಸಂಖ್ಯೆ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ  ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಛೇರಿಗೆ ಸಲ್ಲಿಸಬೇಕಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Lifetime, certificate, mandatory, artists