ತಹಶೀಲ್ದಾರ್ ಅಜಿತ್ ರೈ ಬಂಧಿಸಿದ ಲೋಕಾಯುಕ್ತ ಪೊಲೀಸರು.

ಬೆಂಗಳೂರು, ಜೂನ್,29,2023(www.justkannada.in): ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಕೆಆರ್​ ಪುರ ತಹಶೀಲ್ದಾರ್ ಅಜಿತ್​ ರೈ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ತಹಶೀಲ್ದಾರ್  ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ  ಸತತ 30 ಗಂಟೆಗಳ ಶೋಧ ನಡೆಸಿದ್ದರು.  ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವುದು ಕಂಡು ಬಂದ ಹಿನ್ನೆಲೆ ಅಜಿತ್ ರೈ ಅವರನ್ನು ಬಂಧಿಸಲಾಗಿದ್ದು, 24 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಅಜಿತ್​ ರೈಗೆ ಸಂಬಂಧಿಸಿದ 11 ಸ್ಥಳಗಳಲ್ಲಿ  ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳನ್ನು, ಐಷಾರಾಮಿ ಕಾರು ಮತ್ತು ಬೈಕ್​ಗಳನ್ನು ವಶಕ್ಕೆ ಪಡೆದಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿದ್ದು, ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್​ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಜಿತ್ ರೈ ಬಂಧಿಸಲಾಗಿದೆ.

Key words: Lokayukta-police- arrested -Tehsildar -Ajit Rai.