ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಬೆಂಗಳೂರು ಸೇರಿದಮತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬೆಂಗಳೂರು, ಯಾದಗಿರಿ ಬಾಗಲಕೋಟೆ, ಧಾರವಾಡ, ಹಾಸನ, ವಿಜಯಪುರ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಹಾಗೂ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ ಪೆಕ್ಟರ್ ವಿರೇಶ್ ಹಿರೇಮಠ್ ಅವರ  ಮನೆ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.

ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಅವರ ಮನೆಗಳ ಜೊತೆಗೆ ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಅವರ ಸಹೋದರ ಭೀಮಸಿಂಗ್ ನಾಯಕ್ ಅವರ ಮನೆ ಮೇಲೂ ದಾಳಿ ನಡೆದಿದೆ. ಭೀಮಸಿಂಗ್ ನಾಯಕ್ ಅವರು ಬಾಗಲಕೋಟೆ ಡಿಎಆರ್‌ನಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಬಾಗಲಕೋಟೆ ತಾಲೂಕಿನ ಬಿಲ್ ಕೆರೂರು ಗ್ರಾಮದಲ್ಲಿರುವ ಅವರ ಮೂಲ ನಿವಾಸದಲ್ಲಿಯೂ ಪರಿಶೀಲನೆ ನಡೆಸಲಾಗಿದೆ.

ಮಂಡ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Key words: Lokayukta, raids, inspections, state