ಧಾರವಾಡ,ಸೆಪ್ಟಂಬರ್,17,2026 (www.justkannada.in): 50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕೂಚನೂರ ಲೋಕಾಯುಕ್ತ ಬಲೆಗೆ ಬಿದ್ದವರು. ತಹಶೀಲ್ದಾರ್ ಸಚ್ಚಿದಾನಂದ ಅವರು ವ್ಯಕ್ತಿಯೊಬ್ಬರ ಬಳಿ ಭೂಮಿ ಎ ಖರಾಬು ತೆಗೆಯಲು 1 ಕೋಟಿ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 50 ಲಕ್ಷ ರೂ. ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ತಹಶೀಲ್ದಾರ್ ಸಚ್ಚಿದಾನಂದ ಕೂಚನೂರ ಅವರನ್ನ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು ಲೋಕಾಯುಕ್ತ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಾಜ್ಯದಲ್ಲ ಇದು ದೊಡ್ಡ ದಾಳಿಯಾಗಿದೆ. ಲಂಚ ಪಡೆಯುವಾಗ ಧಾರವಾಡ ತಹಶೀಲ್ದಾರ್ ಟ್ರ್ಯಾಪ್ ಮಾಡಿದ್ದೇವೆ ಎಂದು ಲೋಕಾಯುಕ್ತ ಎಸ್ ಪಿ ಸಿದ್ದಲಿಂಗಪ್ಪ ತಿಳಿಸಿದ್ದಾರೆ.







