Friday, September 11, 2026

BDA Apartments

Welcome to Just Kannada Online News Portal BDA JK_Adv BDA Adv
Home Front Page ಹೊಸಕಡಜೆಟ್ಟಿ ಮಹದೇವಮ್ಮ ಸಾವು ಪ್ರಕರಣ: ಮೃತಳ ಮಗಳಿಗೆ ₹4.12 ಲಕ್ಷ ಪರಿಹಾರ

ಹೊಸಕಡಜೆಟ್ಟಿ ಮಹದೇವಮ್ಮ ಸಾವು ಪ್ರಕರಣ: ಮೃತಳ ಮಗಳಿಗೆ ₹4.12 ಲಕ್ಷ ಪರಿಹಾರ

ಮೈಸೂರು,ಸೆಪ್ಟಂಬರ್,11,2026 (www.justkannada.in):  ನಂಜನಗೂಡು ತಾಲೂಕಿನ ಹೊಸಕಡಜೆಟ್ಟಿ ಗ್ರಾಮದ ಮಹದೇವಮ್ಮ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಮೃತಳ ಮಗಳು ಗೀತಾ ಅವರಿಗೆ ₹4,12,500 ಪರಿಹಾರದ ಚೆಕ್ ವಿತರಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗು ಅವರು ಗೀತಾ ಅವರಿಗೆ ಚೆಕ್ ಹಸ್ತಾಂತರಿಸಿದರು.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನವೀನ್ ಎಂಬಾತ ಮಹದೇವಮ್ಮ ಅವರ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಗೀತಾ ಅವರಿಗೆ ₹20 ಸಾವಿರ ನೀಡಿ ರಾಜಿ ಮಾಡಿಸಲು ಮಧ್ಯವರ್ತಿಗಳು ಯತ್ನಿಸಿದ್ದರು ಎಂಬ ಆರೋಪವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆದ ಬಳಿಕ, ಹುಲ್ಲಹಳ್ಳಿ ಠಾಣೆಯಲ್ಲಿ ಆರೋಪಿ ನವೀನ್ ವಿರುದ್ಧ ಪ್ರಕರಣ ದಾಖಲಾಗಿದೆ.Mahadevamma jk02_new jk02 new

ನಿಯಮಾನುಸಾರ ಒಟ್ಟು ₹8 ಲಕ್ಷ ಪರಿಹಾರ ನೀಡಬೇಕಿದ್ದು, ಈಗ ₹4.12 ಲಕ್ಷ ವಿತರಿಸಲಾಗಿದೆ. ಉಳಿದ ಮೊತ್ತವನ್ನು ಕೆಲ ದಿನಗಳಲ್ಲಿ ನೀಡುವುದಾಗಿ ಇಲಾಖೆ ಭರವಸೆ ನೀಡಿದೆ.

 

English Summary
Title

Mahadevamma Death Case: ₹4.12 Lakh Relief

Short Description
Mysuru: The Social Welfare Department has handed over a ₹4.12 lakh compensation cheque to Geetha, daughter of Mahadevamma of Hosakadajetti village in Nanjangud taluk. Assistant Director Siddalingu handed over the cheque. Mahadevamma had died after allegedly being assaulted over a financial dispute. Police later registered a case against the accused Naveen following protests. The government is expected to provide ₹8 lakh in total, with the remaining amount to be released soon.
Keywords
Mahadevamma, Death Case, ₹4.12 Lakh, Relief