Sunday, August 23, 2026

BDA Apartments

Home Front Page ಬಹುಮತ ಸಾಬೀತುಪಡಿಸುವಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ ಯಶಸ್ವಿ.

ಬಹುಮತ ಸಾಬೀತುಪಡಿಸುವಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ ಯಶಸ್ವಿ.

ಮುಂಬೈ,ಜುಲೈ,4,2022(www.justkannada.in): ಇತ್ತೀಚೆಗಷ್ಟೆ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡಾಯವೆದ್ದು ನಂತರ ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿ ಸಿಎಂ ಆಗಿರುವ ಏನಕಾಥ್ ಸಿಂಧೆ ಇದೀಗ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಜಯಗಳಿಸಿದೆ. ಸಿಎಂ ಏಕನಾಥ್ ಸಿಂಧೆ ಪರ 164 ಮತಗಳು ಚಲಾವಣೆಯಾಗಿದ್ದು, ಈ ಮೂಲಕ ಬಹುಮತ ಸಾಬೀತುಪಡಿಸುವಲ್ಲಿ ಏಕನಾಥ್ ಸಿಂಧೆ ಯಶಸ್ವಿಯಾಗಿದ್ದಾರೆ.

ತಮ್ಮ ಪಕ್ಷ ಶಿವಸೇನೆ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಸಿಂಧೆ 39 ಇತರ ಶಾಸಕರೊಂದಿಗೆ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸದನದಲ್ಲಿ ಬಹುಮತ ಸಾಬೀತುಪಡಿಸಬೇಕಿತ್ತು.

Key words: Maharashtra CM- Eknath Sinde- succeeded -proving -majority.