• Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Search
Tuesday, September 30, 2025
Sign in
Welcome! Log into your account
Forgot your password? Get help
Privacy Policy
Password recovery
Recover your password
A password will be e-mailed to you.
Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ
vtu
  • Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Home Front Page ಮಹಾತ್ಮ ಗಾಂಧಿ ಲೋಗೋ ಅನಾವರಣ: ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಯು.ಟಿ. ಖಾದರ್
  • Front Page
  • News
  • Politics

ಮಹಾತ್ಮ ಗಾಂಧಿ ಲೋಗೋ ಅನಾವರಣ: ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಯು.ಟಿ. ಖಾದರ್

By
prashanth
-
09/12/2024
Facebook
Twitter
Pinterest
WhatsApp

    ಬೆಳಗಾವಿ,ಡಿಸೆಂಬರ್,9,2024 (www.justkannada.in):  ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ” ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣಗೊಳಿಸಿದರು.

    ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ, ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.‌

    ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಸ್ಪೀಕರ್ ಯು.ಟಿ. ಖಾದರ್

    ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸಭಾಧ್ಯಕ್ಷರ ಹುದ್ದೆ ಸಹ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸಭಾಧ್ಯಕ್ಷರು ಆಸೀನರಾಗುವ ಪೀಠ ಸಹ ಅಷ್ಟೇ ಪ್ರಾಮುಖ್ಯತೆ ಹೊಂದಿರಬೇಕು ಎಂಬ ಉದ್ದೇಶದಿಂದ ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಬೆಳಗಾವಿಯಲ್ಲಿನ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆಯ ಸಭಾಂಗಣದಲ್ಲಿರುವ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಬಣ್ಣಿಸಿದರು.

    ವಿಧಾನಸೌಧವನ್ನು ಕಟ್ಟಿಸಿದ ದಿ. ಕೆಂಗಲ್ ಹನುಮಂತಯ್ಯನವರು ಸಭಾಧ್ಯಕ್ಷ ಪೀಠದ ಬಗ್ಗೆ ಒಂದು ಮಹೋನ್ನತ ಪರಿಕಲ್ಪನೆ ಹೊಂದಿದ್ದರು. ಈ ಪೀಠವನ್ನು ವಿಶಿಷ್ಟವಾಗಿ ರೂಪಿಸಬೇಕೆಂದು ಅವರು ಯೋಜಿಸಿದ್ದರು, ಅದರಂತೆ ಅವರು ನಮ್ಮ ಇತಿಹಾಸದಲ್ಲಿ ರಾಜ್ಯವನ್ನು ಬಹಳ ಕಾಲ ಉತ್ತಮವಾಗಿ ಆಡಳಿತ ನಡೆಸಿದ ರಾಷ್ಟ್ರಕೂಟರು ಹಾಗೂ ಹೊಯ್ಸಳರು ಹೊಂದಿದ್ದ ರಾಷ್ಟ್ರ ಲಾಂಛನಗಳನ್ನು ಅದರಲ್ಲಿ ಅಳವಡಿಸಿಕೊಳ್ಳಬೇಕೆಂಬ ಚಿಂತನೆ ನಡೆಸಿ, ಈ ಉದ್ದೇಶಕ್ಕಾಗಿಯೇ ಶಿವಮೊಗ್ಗದಲ್ಲಿ ಲಭ್ಯವಿದ್ದ ಉತ್ತಮ ಗುಣಮಟ್ಟದ ಬೀಟೆ ಮರ ಆಯ್ಕೆ ಮಾಡಿ, ಅಲ್ಲಿನ ಗುಡಿಗಾರರಿಗೆ ತಮ್ಮ ಕನಸಿನ ಚಿಂತನೆಗಳನ್ನು ವಿವರಿಸಿ, ಅದೇ ರೀತಿಯಲ್ಲಿಯೇ ಪೀಠ ಮೂಡಿಬರುವಂತೆ ಮುತುವರ್ಜಿ ವಹಿಸಿದ್ದರು. ರಾಷ್ಟ್ರಕೂಟರು ಹೊಂದಿದ್ದ ಗಂಡಭೇರುಂಡ ಚಿಹ್ನೆಯನ್ನು ಪೀಠದಲ್ಲಿ ಅಳವಡಿಸಿದ್ದರು. ಗಂಡಭೇರುಂಡ ಚಿಹ್ನೆಯನ್ನು ರಾಷ್ಟ್ರಕೂಟರು ತಮ್ಮ ಅಧಿಕಾರ ಹಾಗೂ ಶಕ್ತಿ ಸಾಮರ್ಥ್ಯದ ಪ್ರತೀಕವಾಗಿ ಹಾಗೂ ದೈವಿಕ ರಕ್ಷಣೆ ಹೊಂದಿರುವ ಪ್ರತೀಕವಾಗಿ ಉಪಯೋಸಿದ್ದರು. ಅದೇ ಲಾಂಛನವನ್ನು ಈ ಪೀಠದಲ್ಲಿ ಅದರ ಪ್ರತಿರೂಪವಾಗಿ ಕೆತ್ತಲಾಗಿದೆ.

    ವಿಶಾಲವಾದ ಸಾಮ್ರಾಜ್ಯವನ್ನು ಹೊಂದಿದ್ದ ಹಾಗೂ ಬಹುಕಾಲ ಉತ್ತಮವಾಗಿ ಆಳಿದ ಹೊಯ್ಸಳರು ಸಹ ಶರಭ ಅಂದರೆ ಸಿಂಹದ ಲಾಂಛನ ಹೊಂದಿದ್ದರು. ಸಿಂಹವು ಶೌರ್ಯದ ಪ್ರತೀಕವಾಗಿದ್ದು, ಅದನ್ನೂ ಸಹ ಪೀಠದ ಎರಡೂ ಬದಿಗಳಲ್ಲಿ ಕೆತ್ತಲಾಗಿದೆ. ಅದೇ ರೀತಿ ಪೀಠದ ಮೇಲ್ಭಾಗದಲ್ಲಿ ಸೂರ್ಯಕಾಂತಿ ಹೂವಿನ ಚಿತ್ತಾರವನ್ನು ಕೆತ್ತಲಾಗಿದ್ದು, ಇದು ಸಭಾಧ್ಯಕ್ಷರಿಗೆ ಒಂದು ರೀತಿಯ ಮೇಲ್ಛಾವಣಿಯಂತೆ ರೂಪಿಸಲಾಗಿದೆ. ಪೀಠದ ಮುಂಭಾಗದ ಮೇಲೆ ಸೂರ್ಯ ಮತ್ತು ಚಂದ್ರರ ಚಿಹ್ನೆಗಳನ್ನು ಕೆತ್ತಲಾಗಿದ್ದು, ಸೂರ್ಯ ಮತ್ತು ಚಂದ್ರರ ಚಿಹ್ನೆಯ ಅಮರತ್ವವನ್ನು ಪ್ರತಿರೂಪಿಸುವಂತಹ ಚಿಹ್ನೆಯನ್ನು ಕೆತ್ತಲಾಗಿದೆ. ಪೀಠದ ಮೇಲ್ಭಾಗದ ಎರಡೂ ಬದಿಗಳಲ್ಲಿ ಮಾವಿನ ಕಾಯಿ ರೂಪವನ್ನು ಕೆತ್ತಲಾಗಿದ್ದು, ನಮ್ಮ ದೇಶದಲ್ಲಿ ಮಾವಿನ ಕಾಯಿಗೆ ವೈಜ್ಞಾನಿಕ ಹಾಗೂ ಧಾಮಿಕವಾಗಿ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಮಾವಿನ ಕಾಯಿ ಬೆಳವಣಿಗೆಯ ದ್ಯೋತಕವಾಗಿದ್ದು, ಈ ಹಿನ್ನೆಲೆಯಲ್ಲಿ ಮಾವಿನ ಕಾಯಿ ಪ್ರತಿರೂಪವನ್ನು ಕೆತ್ತಲಾಗಿದೆ.

    ಹೀಗೆ ನಮ್ಮ ದೇಶದ ಇತಿಹಾಸ ಹಾಗೂ ಧಾರ್ಮಿಕತೆಯ ಚಿಹ್ನೆಗಳ ಮಿಶ್ರಣ ರೂಪದಲ್ಲಿರುವ ಈ ಕೆತ್ತನೆಗಳನ್ನು ಬೀಟೆ ಮರದಲ್ಲಿ ಬೆಂಗಳೂರಿನ ವಿಧಾನಸೌಧದ ಪೀಠವನ್ನು ತಯಾರಿಸಿ ಅಳವಡಿಸಲಾಗಿದ್ದು, ಇದೇ ಉದ್ದೇಶದಿಂದ ಬೆಳಗಾವಿಯಲ್ಲಿಯ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆ ಸಭಾಂಗಣದ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ನೂತನವಾಗಿ ಅಳವಡಿಸಲಾಗಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ವಿವರಿಸಿದರು.

    Key words: Mahatma Gandhi,  logo, CM Siddaramaiah, U.T. Khader

    • TAGS
    • CM Siddaramaiah
    • logo
    • Mahatma Gandhi
    • U.T. Khader
    Facebook
    Twitter
    Pinterest
    WhatsApp
      Previous articleMUDA SCAM: “ ಪಬ್ಲಿಕ್ ನೋಟಿಸ್”  ಹೊರಡಿಸಿದ ತಕ್ಷಣ ಸತ್ಯ ಸುಳ್ಳಾಗಲ್ಲ : ಬಿಲ್ಡರ್‌ ಮಂಜುನಾಥ್‌ ಗೆ ಸವಾಲು.
      Next articleಪ್ರೌಢಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್:  ಶೀಘ್ರದಲ್ಲೇ ಬಡ್ತಿ ಭಾಗ್ಯ
      prashanth

      RELATED ARTICLESMORE FROM AUTHOR

      ಸಿಟಿ ರೌಂಡ್ಸ್: ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್  

      ಕಾಲ್ತುಳಿತ ದುರಂತ:  ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ವಿಜಯ್

      ನನ್ನ ವಿರುದ್ದ ಷಡ್ಯಂತ್ರ: ಹಬ್ಬ ಮುಗಿಯಲಿ ಹೆಚ್ ಡಿಕೆಗೆ ಉತ್ತರ ಕೊಡ್ತೇನೆ- ಡಿಸಿಎಂ ಡಿಕೆ ಶಿವಕುಮಾರ್

      Sponsor Ads 1

      Sponsor Ads 2

      Sponsor Ads 3

      Sponsor Ads 4

      EDITOR PICKS

      BREAKING NOW: ಉದಯಗಿರಿ “ ಪ್ರಚೋಧನಕಾರಿ ಪೋಸ್ಟ್‌ “: ಜಾಮೀನು ಕೋರಿ ಕೋರ್ಟ್‌ ಮೊರೆ...

      13/02/2025

      5 ವರ್ಷದಲ್ಲಿ 20 ಲಕ್ಷ ಉದ್ಯೋಗ : ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ...

      11/02/2025

      ಜಾಗತಿಕ ಹೂಡಿಕೆದಾರರ ಸಮಾವೇಶ : 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ...

      11/02/2025

      POPULAR POSTS

      ಪಬ್ಲಿಕ್ ಟಿವಿ ಸಂಪಾದಕ ರಂಗನಾಥ್ ಕಾಲೆಳೆದ ವಿಡಿಯೋ ವೈರಲ್ ಮಾಡಿದ್ದು ಸರಿನಾ..?

      30/03/2020

      ಈ ದಂಪತಿ ನೋಡಿ ಮೈಸೂರಿನ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಭಾನುವಾರ ಬೆಳ್ಳಂಬೆಳಗ್ಗೆ ಶಾಕ್..!

      16/06/2019

      ಇಂತವರಿಂದ ಪಕ್ಷ ಕಟ್ಟಿ ಬೆಳೆಸಲು ಸಾಧ್ಯವಿಲ್ಲ: ಮೈಸೂರಿನಲ್ಲೆ ಪಕ್ಷದಿಂದ ಉಚ್ಚಾಟಿಸುತ್ತೇನೆ- ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದ...

      05/01/2021

      POPULAR CATEGORY

      • Front Page44415
      • News44400
      • Politics25969
      • Crime4147
      • Cinema3593
      • Sports1349
      • Tenders458
      • Media Masala417
      Just Kannada
      ABOUT US
      Just Kannada is a global platform for all issues related to Kannada. At the very root, it’s a news-driven portal. Everything that’s happening in Karnataka, or whatever that’s happening anywhere in the world that has any consequence to Karnataka, is updated here every minute.
      Contact us: info@justkannada.in
      • Terms & Conditions
      • Privacy Policy
      • Refund Policy
      • Grievances
      • Statistics
      • Contact

      Copyright © 2017- . All Rights Reserved: Just Kannada - News 24x7 | Hosted by: DIGICUBE SOLUTIONS

      Subscribe to our News Service @ Just Rs. 399/- per Year and Get Daily Updates Directly to Your Mobile Phones     Subscribe Now | Checkout