ಮಂಡ್ಯ ಜಿಲ್ಲೆಯಲ್ಲಿಂದು ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್​ ಪ್ರಚಾರ

ಮಂಡ್ಯ,ಏಪ್ರಿಲ್,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಪ್ರಚಾರದ ಅಬ್ಬರ ಜೋರಾಗಿದ್ದು ಬಿಜೆಪಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಕರೆಇಸ ರೋಡ್ ಶೋ ಮೂಲಕ ಮತದಾರರನ್ನ ಸೆಳೆಯುತ್ತಿದ್ದರೇ ಇತ್ತ ಕಾಂಗ್ರೆಸ್ ಸಹ  ರಾಹುಲ್ ಗಾಂಧಿ , ಪ್ರಿಯಾಂಕ ಗಾಂಧಿ ಅವರನ್ನ ಕರೆಸಿ ಕ್ಯಾಂಪೇನ್ ನಡೆಸುತ್ತಿದ್ದಾರೆ.

ಈ ಮಧ್ಯೆ ಇಂದು ಸ‍ಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್​ ಕ್ಯಾಂಪೇನ್​ ನಡೆಸುತ್ತಿದ್ದಾರೆ. ಮಳವಳ್ಳಿ, ಕೆ.ಆರ್​.ಪೇಟೆ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಮಳವಳ್ಳಿಗೆ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಭೇಟಿ ನೀಡಲಿದ್ದು ಮಳವಳ್ಳಿ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಕೆ.ಆರ್​.ಪೇಟೆ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಪ್ರಚಾರ ಮಾಡಲಿದ್ದಾರೆ.

Key words: Mallikarjuna Kharge-D.K.Sivakumar -campaign – Mandya district