ಮಂಡ್ಯ: ಮಾರಕಾಸ್ತ್ರದಿಂದ ಹಲ್ಲೆಗೈದು ಜೆಡಿಎಸ್ ಮುಖಂಡನ ಹತ್ಯೆಗೆ ಯತ್ನ.

ಮಂಡ್ಯ,ಆಗಸ್ಟ್,12,2023(www.justkannada.in):  ಮಾರಕಾಸ್ತ್ರದಿಂದ ಹಲ್ಲೆಗೈದು ಜೆಡಿಎಸ್ ಮುಖಂಡರೊಬ್ಬರ ಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಆಂಜನೇಯಸ್ವಾಮಿ ದೇಗುಲದ ಬಳಿ ಈ ಘಟನೆ ನಡೆದಿದೆ.  ಜೆಡಿಎಸ್ ಮುಖಂಡ ಅಪ್ಪುಗೌಡ ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ.

ರಾಜಕೀಯ ವೈಷಮ್ಯಕ್ಕೆ ಮದ್ದೂರು ಪುರಸಭೆ ಜೆಡಿಎಸ್​​ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್​ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಗಾಯಗೊಂಡ ​​ ಅಪ್ಪುಗೌಡರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮದ್ದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Mandya- Attempt – kill -JDS leader