ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ಧ ದರೋಡೆಕೋರರಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..

ಮಂಡ್ಯ,ಸೆಪ್ಟಂಬರ್,15,2022(www.justkannada.in):  ದರೋಡೆಗೆ ಯತ್ನಿಸಿದ ದರೋಡೆಕೋರರನ್ನ ಗ್ರಾಮಸ್ಥರು ಹಿಡಿದು ಧರ್ಮದೇಟು ನೀಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಬನ್ನಘಟ್ಟ ಗ್ರಾಮದಲ್ಲಿ ನಡೆದಿದೆ.

ಇನ್ನೋವಾ ಕಾರಿನಲ್ಲಿ ಬಂದಿದ್ದ ನಾಲ್ವರು ದರೋಡೆಕೋರರು ಕೈಯಲ್ಲಿ ಗನ್ ಹಿಡಿದು  ಕಾರು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದರು. ಈ ವೇಳೆ ಕಾರು ಚಾಲಕನ ಕೂಗಾಟ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ.

ಗ್ರಾಮಸ್ಥರ ಸುತಯ್ತವರೆಯುತ್ತಿದ್ದಂತೆ ದರೋಡೆಕೋರರು ಪರಾರಿಯಾಗಲು ಯತ್ನಿಸಿದ್ದು,  ಇಬ್ಬರನ್ನ ಹಿಡಿದು ಗ್ರಾಮದ ಜನರು ಥಳಿಸಿದ್ದಾರೆ.  ಮರಕ್ಕೆ ಕಟ್ಟಿ ಹಾಕಿ ಗನ್ ಕಿತ್ತುಕೊಂಡು ಥಳಿಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: mandya- Robbery-locals -caught -red-handed.