ಬೀದಿಬದಿ ಆಹಾರ ಸೇವನೆ ಬಿಡಿ: ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ- ಪಾಲಿಕೆ ಆರೋಗ್ಯಧಿಕಾರಿ ಸಲಹೆ

ಮೈಸೂರು,ಮೇ,31,2025 (www.justkannada.in): ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರ ಸೇವಿಸಬೇಡಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಧಿಕಾರಿ ಡಾ. ವೆಂಕಟೇಶ್ ಸಲಹೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯಧಿಕಾರಿ ಡಾ. ವೆಂಕಟೇಶ್, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದೆ. ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ಮಾರಣಾಂತಿಕ ಕಾಯಿಲೆ ಬರುವ ಸಾಧ್ಯತೆಗಳಿವೆ. ನಿಂತ ನೀರಿನಿಂದ ಸೊಳ್ಳೆಗಳ ಸಂತಾನ ಹೆಚ್ಚಾಗಲಿವೆ. ಆದ್ದರಿಂದ ನಾಗರೀಕರು  ಸೊಳ್ಳೆ ಬಾರದ ಹಾಗೆ ಎಚ್ಚರವಹಿಸಿ , ಸ್ವಚ್ಛತೆ ಕಾಪಾಡಿಕೊಳ್ಳಬೇಕು.  ಸದ್ಯ ಕೋವಿಡ್ ಬಗ್ಗೆ ಭಯ ಪಡೋದು ಬೇಡ. ನಾಗರೀಕರು ಎಲ್ಲೆಂದರಲ್ಲಿ ಕಸ ಬೀದಿಗೆ ಹಾಕಬಾರದು. ರಾತ್ರಿ ವೇಳೆ ಬೀದಿಬದಿ ವ್ಯಾಪಾರಸ್ಥರು ಹೆಚ್ಚಾಗಿ ಕಸ ಹಾಕುತ್ತಿದ್ದಾರೆ. ಬಿಸಾಕಿದ ಕಸ ಮಳೆ ನೀರಿಗೆ ಸಿಲುಕಿ ಚರಂಡಿಗೆ ಸೇರಿಕೊಳ್ಳುತ್ತದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ತೆರಳಲು ಸಾಧ್ಯವಾಗೋದಿಲ್ಲ. ನಮ್ಮೊಂದಿಗೆ ನಗರದ ಜನರು ಸಹಕರಿಸಿ ಎಂದು ಮನವಿ ಮಾಡಿದರು.vtu

ಕಸದ ಸಮಸ್ಯೆ ಇದ್ದರೆ ಪಾಲಿಕೆಗೆ ಒಂದೇ ಒಂದು ಕಾಲ್ ಮಾಡಿ. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರ ಸೇವಿಸಬೇಡಿ. ಕಸದ ಸಮಸ್ಯೆ ಎದುರಿಸಲು ನಮ್ಮ ತಂಡ ಸಜ್ಜಾಗಿದೆ. ಕಸ ಕಂಡಲ್ಲಿ ಒಂದೇ ಒಂದು ಫೋಟೋ ಅಥವಾ ಕಾಲ್ ಮಾಡಿ ಮಾಹಿತಿ ನೀಡಿ. ಕೇವಲ ಒಂದೇ ಗಂಟೆಯಲ್ಲೇ ಸಮಸ್ಯೆ ಸರಿಪಡಿಸುತ್ತೇವೆ. ಎಲ್ಲೆಂದರಲ್ಲಿ ಕಸ ಬಿಸಾಕುವವರಿಗೆ ದಂಡ ಹಾಕುತ್ತಿದ್ದೇವೆ. ಕೆಲವು ಗಂಭೀರ ಪ್ರಕರಣವಿದ್ದರೆ ಎಫ್ ಐಆರ್  ಅನ್ನು ದಾಖಲಿಸುತ್ತೇವೆ ಎಂದು ಪಾಲಿಕೆ ಅರೋಗ್ಯಧಿಕಾರಿ ಡಾ ವೆಂಕಟೇಶ್ ಹೇಳಿದರು.

Key words: Protect, health, from, mosquitoes, MCC, health officer