ಮೆಡಿಕಲ್ ಕಾಲೇಜು ಸ್ಥಳಾಂತರ ಹಿನ್ನೆಲೆ: ರಾಮನಗರ ಬಂದ್ ಗೆ ಕರೆ.

ರಾಮನಗರ,ಸೆಪ್ಟಂಬರ್,8,2023(www.justkannada.in):  ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಆದ ಹಿನ್ನೆಲೆಯಲ್ಲಿ  ರಾಮನಗರ ಬಂದ್ ಗೆ ಕರೆ ನೀಡಲಾಗಿದೆ.

ವಿವಿಧ ಸಂಘಟನೆಗಳು ಇಂದು ರಾಮನಗರ ಬಂದ್​​ಗೆ ಕರೆ ನೀಡಿದ್ದಿ,  ಐಜೂರು ವೃತ್ತದಲ್ಲಿ ಪ್ರತಿಭಟನೆ ಪ್ರಾರಂಭವಾಗಿದೆ.  ಪ್ರತಿಭಟನೆಯಲ್ಲಿ ಜೆಡಿಎಸ್, ಬಿಜೆಪಿ ಕನ್ನಡಪರ ಸಂಘಟನೆಗಳ ಸದಸ್ಯರು ಭಾಗಿಯಾಗಲಿದ್ದಾರೆ. ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್  ಇದೆ.

ವಿವಿಧ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದು, ಎಪಿಎಂಸಿ ಸಂಪೂರ್ಣ ಸ್ತಬ್ಧವಾಗಿದೆ. ರೈತರು ಸ್ವಯಂಪ್ರೇರಿತರಾಗಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ವರ್ತಕರು, ವ್ಯಾಪಾರಿಗಳು, ದಲ್ಲಾಳಿಗಳು, ರೈತರು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words:  Medical -College – – Call – Ramnagar -bandh.