ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ಮತ್ತು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬಗ್ಗೆ ಟೀಕಿಸಿದ ಸಚಿವ ಚಲುವರಾಯಸ್ವಾಮಿ.

ಮಂಡ್ಯ,ನವೆಂಬರ್,16,2023(www.justkannada.in): ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅಧಿಕಾರ ವಹಿಸಿಕೊಂಡಿರುವ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಚಲುವರಾಯಸ್ವಾಮಿ,  ಅನಿವಾರ್ಯವಾಗಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಕಳೆದ ಆರು ತಿಂಗಳಿಂದ ವಿರೋಧ ಪಕ್ಷದ ನಾಯಕರೇ ಸಿಕ್ಕಿಲ್ಲ. ಅನಿವಾರ್ಯವಾಗಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ ಹೆಚ್.ಡಿ ಕುಮಾರಸ್ವಾಮಿ ಸಹ ಪ್ರೀತಿಯಿಂದ ಬಿಜೆಪಿಗೆ ಹೋಗಿಲ್ಲ ಅನಿವಾರ್ಯದಿಂದ ಹೋಗಿದ್ದಾರೆ ಎಂದರು.

ಹೆಚ್.ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಈ ವಿಚಾರ ಬಿಟ್ಟು ಮುಂದೆ ಹೋಗೋಣ ಎಂದರು. ಗೃಹಜ್ಯೋತಿ ಬಗ್ಗೆ ಟೀಕೆ ವಿಚಾರ ಹೆಚ್ ಡಿ ಕುಮಾರಸ್ವಾಮಿ ಸಪೋರ್ಟ್ ಮಾಡಿದವರನ್ನೆ ಮರೆಯುತ್ತಾರೆ. ಸಹಾಯ ಮಾಡಿದವರನ್ನ ನೆನೆಯುವಂತದ್ದನ್ನ ನಾನು ನೋಡಿಲ್ಲ ಎಂದು ಕುಟುಕಿದರು.

Key words: Minister -Chaluvarayaswamy -criticized -Vijayendra’s – state president