Thursday, August 13, 2026

BDA Apartments

Home Front Page ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನೀಟ್ –ಯುಜಿ ಪರೀಕ್ಷೆಯನ್ನು ರದ್ದು ಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ನೀಟ್ ಪರೀಕ್ಷೆ ಜವಾಬ್ದಾರಿ ರಾಜ್ಯಗಳಿಗೆ ನೀಡಿ,  ನಾವೇ ಪರೀಕ್ಷೆ ಮಾಡುತ್ತೇವೆ. ನಾವು ಮತ್ತೆ ಸುಪ್ರೀಂ ಕೋರ್ಟ್ ಮೋರೆ ಹೋಗುವ ಬಗ್ಗೆ ಚರ್ಚೆ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿದ ಬಳಿಕ ನಿರ್ಧಾರ ಮಾಡಲಾಗುತ್ತೆ ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅನೇಕ ಯುವಕರಿಗೆ ತೊಂದರೆ ಆಗುತ್ತಿದೆ.  ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ.  ಸಚಿವರು ಹೇಳುವ ಪ್ರಕಾರ ಸುಪ್ರೀಂಕೋರ್ಟ್ ಗೆ ಹೋಗಬೇಕಾಗುತ್ತದೆ  ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words: NEET, states, conduct, exam, Minister, Dinesh Gundu Rao