ಬೆಂಗಳೂರು,ಜೂನ್,5,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಮೃತಪಟ್ಟ ಘಟನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆದ ಕಾಲ್ತುಳಿತ ಘಟನೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಸೂತಕದ ಸಮಯಲ್ಲಿ ರಾಜಕೀಯ ಮಾಡುವುದು ಬೇಡ. ಯಾರೂ ಕೂಡು ರಾಜಕೀಯ ಮಾಡಬಾರದು. ಈ ವೇಳೆ ವೈಪಲ್ಯದ ಬಗ್ಗೆ ಚರ್ಚಿಸುವ ಸಮಯವಲ್ಲ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.
Key words: Stampede, Minister, Lakshmi Hebbalkar