Saturday, August 1, 2026

BDA Apartments

Home Front Page ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೆ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ ಒದಗಿಸಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಯು ವಿಜಯೇಂದ್ರ ಅವರ ಅಧ್ಯಕ್ಷತೆಯ ಹೋಗುತ್ತಿದೆ. ಈ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಸೋತರೆ ವಿಜಯೇಂದ್ರ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ.  ಹೀಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ  ಮರಳಿ ಬಿಜೆಪಿ ಸೇರಲು ಇದೊಂದು ಒಳ್ಳೆಯ ಅವಕಾಶ. ಬಿಜೆಪಿಯನ್ನು ಸೋಲಿಸಿ ವಿಜಯೇಂದ್ರ ಅವರನ್ನು ಕೆಳಗಿಳಿಸುವ ತಮ್ಮ ಕನಸು ನನಸು ಮಾಡಿಕೊಳ್ಳಬೇಕು ಎಂದು ಯತ್ನಾಳ್ ಗೆ ಸಲಹೆ ನೀಡಿದರು.

ಒಂದು ವೇಳೆ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ವಿಜಯೇಂದ್ರ ಅವರ ಬಲ ಹೆಚ್ಚಲಿದೆ. ಬಿಜೆಪಿ ಸೋತರೆ ವಿಜಯೇಂದ್ರ ಬಲ ಕುಸಿಯಲಿದೆ. ಯತ್ನಾಳ್ ಅವರನ್ನ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ. ಅವರಿಗೆ ಸ್ವಾಭಿಮಾನ, ಇದ್ದರೆ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ತೋರಿಸಲಿ.  ನಾವಂತೂ ಎರಡೂ ಕ್ಷೇತ್ರದಲ್ಲಿ ಗೆಲ್ಲುವುದು ನಿಶ್ಚಿತ ಎಂದು ಸಚಿವ ಎಂ.ಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

Key words: By-election, Yatnal, rejoin, BJP, Minister, M.B. Patil