ಬೆಂಗಳೂರು,ಜೂನ್,20,2025 (www.justkannada.in): ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ದಂಪತಿಯ ಮಗುವನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕಲು ಈಗಾಗಲೇ ಕಠಿಣ ಕಾನೂನು ತಂದಿದ್ದೇವೆ. ಆದರೂ ಇಂತಹ ವರ್ತನೆ ಸರಿಯಲ್ಲ. ಮಗುವನ್ನ ಕರೆದೊಯ್ದವರು ಕಠಿಣ ಹೃದಯಿಗಳು. ಮಾನವೀಯತೆ ಇಲ್ಲದವರು ಮಗುವನ್ನ ಅಪಹರಣ ಮಾಡಿದಾರೆ. ಈ ಬಗ್ಗೆ ಇಂದು ಮೈಸೂರು ಪೊಲೀಸ್ ಕಮಿಷನರ್ ಅಥವಾ ಐಜಿ ಬಳಿ ಮಾತಾನಾಡುತ್ತೇನೆ. ಮಾತಾಡಿ ಕ್ರಮ ತಗೋತೇವೆ ಎಂದರು.
ವಸತಿ ಇಲಾಖೆಯಿಂದ ಸರ್ಕಾರಿ ಮನೆಗಳನ್ನ ಪಡೆಯಲು ಲಂಚ ನೀಡಬೇಕು ಎಂಬ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೇನೆ. ಬಿ. ಆರ್ ಪಾಟೀಲರು ಯಾವ ಅರ್ಥದಲ್ಲಿ ಹೇಳಿದಾರೆ ಅಂತಾ ಗೊತ್ತಿಲ್ಲ. ಅವರು ನೇರವಾಗಿ ಹೇಳಿಲ್ಲ. ವಸತಿ ಇಲಾಖೆ ಸಚಿವರು ಜಮೀರ್ ಇದ್ದಾರೆ. ಯಾರು ಲಂಚ ಕೇಳುತ್ತಿದ್ದಾರೆ ಅಂತಾ ದೂರು ಕೊಡಲಿ, ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
Key words: Mysore, Action. Against. Microfinance,Home Minister, Parameshwar