ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ ಎಸ್ ಐಟಿ ತನಿಖೆ ನಡೆಯುತ್ತಿದೆ. ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.
ವಿಧಾನಸಭೆ ಕಲಾಪದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ ಪ್ರಕರಣ ಕುರಿತು ಪ್ರಸ್ತಾಪಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂಧ 164 ಹೇಳಿಕೆ ನೀಡಿದ್ದಾನೆ. ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ.
ಈ ಬಗ್ಗೆ ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.
Key words: Dharmasthala case, SIT , Session, Minister, Parameshwar