Wednesday, July 29, 2026

BDA Apartments

Home Front Page ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು ಆರಂಭವಾಗದೆ ಉದ್ಯೋಗಾಕಾಂಕ್ಷಿಗಳು ಪರಿತಪಿಸುತ್ತಿದ್ದಾರೆ. ಈ ಬಗ್ಗೆ ಪ್ರತಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಳಮೀಸಲಾತಿ ಜಾರಿಗೆ ಬದ್ದ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಪರಮೇಶ್ವರ್ , ಕೆಲವು ಕಾನೂನಿನ ತೊಡಕುಗಳಿವೆ.  ಎಲ್ಲರು ಸ್ವಲ್ಪ ಸಹನೆಯಿಂದ ಇದ್ದರೆ ಕೆಲಸ ಆಗುತ್ತದೆ.  ಒತ್ತಡ ಹಾಕುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ದವಿದೆ.  ಎಲ್ಲರೂ ಚರ್ಚೆ ಮಾಡಿ ತೊಡಕುಗಳನ್ನ ಬಗೆಹರಿಸುತ್ತೇವೆ ಮುಂದಿನ ಸಂಪುಟದಲ್ಲಿ ನಿರ್ಣಯ ಮಾಡುವ ವಿಶ್ವಾಸವಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

Key words: implementing, internal reservation, Home Minister, Parameshwar