ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ ಹೆಚ್.ಡಿಕೆಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು.

ಬೆಂಗಳೂರು,ಜೂನ್,28,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ  ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಹಿಂದೆ ನಾವು ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದವು. ಈಗ ಪ್ರಾಮಾಣಿಕ ಅಧಿಕಾರಿಗಳನ್ನ ಪೋಸ್ಟಿಂಗ್ ಮಾಡುತ್ತಿದ್ದೇವೆ. ಹೀಗಾಗಿ ಸರ್ಕಾರ ಯಾವುದೇ  ಭ್ರಷ್ಟಾಚಾರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾರಿಗೆ ನೌಕರರಿಗೆ ಈ ತಿಂಗಳ ವೇತನ ನೀಡಲ್ಲ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ, ವೇತನ ನೀಡಲ್ಲ ಎಂಬುದು ವದಂತಿ. ಇದಕ್ಕೆ ನಾನು ಉತ್ತರ ನೀಡಲ್ಲ ನಾಲ್ಕು ನಿಗಮಗಳ ನೌಕರರಿಗೆ ವೇತನ ನೀಡುತ್ತೇವೆ ಎಂದರು.

Key words: Minister -Ramalingareddy – HDK – government – transfer scam.