Sunday, August 30, 2026

BDA Apartments

Home Front Page ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್

ಬೆಂಗಳೂರು,ಮೇ,28,2026 (www.justkannada.in): ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ  ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದ್ದು ಇದಕ್ಕೂ ಮುನ್ನ ತಮ್ಮ ಸಂಪುಟ ಸಹದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜಿಸಿದ್ದರು. ಉಪಹಾರ ಸಭೆ ಮುಕ್ತಾಯವಾದ ಬಳಿಕ ಹೊರ ಬಂದ ಸಚಿವ ಸಂತೋಷ್ ಲಾಡ್ ಮಾಧ್ಯಮದ ಮುಂದೆ ಕಣ್ಣೀರು ಹಾಕಿದ್ದಾರೆ.

ಸಭೆ ಬಳಿಕ  ಮಾಧ್ಯಮಗಳು ಪ್ರಶ್ನಿಸುವ ವೇಳೆ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ್ದಾರೆ. ಒಂದುವರೆ ಗಂಟೆಗೂ ಹೆಚ್ಚು ಕಾಲ ಬ್ರೇಕ್ ಫಾಸ್ಟ್  ಮೀಟಿಂಗ್ ನಡೆದಿದ್ದು ಈ ವೇಳೆ ಸಚಿವರಿಗೆ ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎನ್ನಲಾಗಿದೆ.

Key words: CM Siddaramaiah,  resignation, Minister, Santosh Lad, tears