Sunday, August 23, 2026

BDA Apartments

Home Front Page ಬಜೆಟ್ ಬಳಿಕ ಅಧಿಕಾರ ಹಂಚಿಕೆ ಎಂದು ಹೇಳಿಲ್ಲ: ಸಿಎಂ ರೇಸ್ ನಲ್ಲೂ ನಾನಿಲ್ಲ- ಸಚಿವ ಸತೀಶ್...

ಬಜೆಟ್ ಬಳಿಕ ಅಧಿಕಾರ ಹಂಚಿಕೆ ಎಂದು ಹೇಳಿಲ್ಲ: ಸಿಎಂ ರೇಸ್ ನಲ್ಲೂ ನಾನಿಲ್ಲ- ಸಚಿವ ಸತೀಶ್ ಜಾರಕಿಹೊಳಿ

ಮೈಸೂರು,ಜನವರಿ,5,2026 (www.justkannada.in):  ಬಜೆಟ್ ಬಳಿಕ ಅಧಿಕಾರ ಹಂಚಿಕೆಯಾಗುತ್ತದೆ ಎಂದು ನಾನು ಹೇಳಿಲ್ಲ. ನಾನು ಸಿಎಂ ರೇಸ್ ನಲ್ಲೂ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿರುವುದು.  ಈ ಬಗ್ಗೆ ನಾವು ಹಲವು ಬಾರಿ ಹೇಳಿಕೆ ನೀಡಿದ್ದೇವೆ. ಸಿಎಂ ಸಹ ಹಲವು ಬಾರಿ ಹೇಳಿದ್ದಾರೆ. ಮತ್ತೆ ಈ ಬಗ್ಗೆ ಚರ್ಚೆ ಬೇಡ. ಎಂದರು.

ಅಧಿಕಾರ ಹಂಚಿಕೆ ನಿರ್ಧಾರ ಮಾಡುವ ಸ್ಥಾನದಲ್ಲೂ ನಾನು ಇಲ್ಲ. ನಾನು ಸಿಎಂ ರೇಸ್ ನಲ್ಲೂ ಇಲ್ಲ. ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಚರ್ಚೆ ಇಲ್ಲ ಬಂದಾಗ ನೋಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words:  power sharing, budget, Minister, Sathish Jarkiholi, Mysore