Friday, August 7, 2026

BDA Apartments

Home Front Page ಕೊಬ್ಬರಿ ಬೆಂಬಲ ಬೆಲೆ  ಹೆಚ್ಚುಸುವ ಕುರಿತು ಸಿಎಂ ಜೊತೆ ಚರ್ಚಿಸಿ ಕ್ರಮ – ಸಚಿವ ಶಿವಾನಂದ...

ಕೊಬ್ಬರಿ ಬೆಂಬಲ ಬೆಲೆ  ಹೆಚ್ಚುಸುವ ಕುರಿತು ಸಿಎಂ ಜೊತೆ ಚರ್ಚಿಸಿ ಕ್ರಮ – ಸಚಿವ ಶಿವಾನಂದ ಪಾಟೀಲ್ ಭರವಸೆ.

ಬೆಂಗಳೂರು, ಜುಲೈ, 5,2023(www.justkannada.in): ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು  ಎಂದು ಜವಳಿ,  ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದಲ್ಲಿ ನಿಯಮ 69ರ ಚರ್ಚೆಯಲ್ಲಿ ತೆಂಗು ಮತ್ತು ಕೊಬ್ಬರಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿಂದ ಹಾಗೂ ಕನಿಷ್ಟ ಬೆಂಬಲ ಬೆಲೆಯೂ ಸಹ ಕಡಿಮೆಯಾಗುತ್ತಿರುವುದರಿಂದ ಬೆಂಬಲ ಬೆಲೆ ಹೆಚ್ಚಿಸುವ ಬಗ್ಗೆ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ,  ಎಂ.ಟಿ.  ಕೃಷ್ಣಪ್ಪ ಮುಂತಾದವರ ಚರ್ಚೆಗೆ  ಸಚಿವ ಶಿವಾನಂದ್ ಪಾಟೀಲ್ ಉತ್ತರಿಸಿದರು.

ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ  ವಹಿಸಲಾಗುವುದು ಎಂದು ತಿಳಿಸಿದರು.

Key words: Minister -Sivananda Patil – discuss – CM – support price – coconut.