Friday, August 28, 2026

BDA Apartments

Home Front Page ಒಳಮೀಸಲಾತಿ ಬಿಲ್: ಸಚಿವರ ನಿಯೋಗದಿಂದ ರಾಜ್ಯಪಾಲರ ಭೇಟಿ

ಒಳಮೀಸಲಾತಿ ಬಿಲ್: ಸಚಿವರ ನಿಯೋಗದಿಂದ ರಾಜ್ಯಪಾಲರ ಭೇಟಿ

ಬೆಂಗಳೂರು,ಫೆಬ್ರವರಿ,26,2026 (www.justkannada.in):  ಕೂಡಲೇ ನೇಮಕಾತಿ ಆರಂಭಕ್ಕೆ ಆರಂಭಕ್ಕೆ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಳೆದ ಎರಡು ದಿನದ ಹಿಂದೆ ನಡೆದ ವಿದ್ಯಾರ್ಥಿಗಳ ಹೋರಾಟಕ್ಕೆ ಬೆದರಿದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಒಳಮೀಸಲಾತಿ ಗೊಂದಲಗಳನ್ನ ಸರಿಪಡಿಸಿ ನೇಮಕಾತಿ ಆರಂಭಕ್ಕೆ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಸಚಿವರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ಒಳಮೀಸಲಾತಿ ಬಿಲ್ ಗೆ ಬೇಗ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ.  ಸಿಎಂ ಸಿದ್ದರಾಮಯ್ಯ ಜೊತ ಸಭೆ ಬಳಿಕ ಸಚಿವರಾದ ಪರಮೇಶ್ವರ್, ಕೆ.ಎಚ್ ಮುನಿಯಪ್ಪ, ಹೆಚ್.ಸಿ ಮಹದೇವಪ್ಪ, ಸತೀಶ್ ಜಾರಕಿಹೊಳಿ  ನೇತೃತ್ವದ ನಿಯೋಗ ರಾಜ್ಯಪಾಲರ ಭೇಟಿ ಮಾಡಿ ಒಳಮೀಸಲಾತಿ ಬಿಲ್ ಗೆ ಸಹಿ ಹಾಕುವಂತೆ  ಮನವಿ ಮಾಡಿದೆ.

ಒಳಮೀಸಲಾತಿ ಬಿಲ್ ನಿಂದ ನೇಮಕಾತಿಗಳಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಬಿಲ್ ಗೆ ಸಹಿ ಮಾಡುವಂತೆ ಮನವಿ ಮಾಡಿದ್ದಾರೆ.

Key words: Internal Reservation, Bill, Ministerial delegation, meets, Governor