Thursday, August 6, 2026

BDA Apartments

Home Front Page ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್

ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್

ಕೋಲಾರ,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ ಮುಂದುವರೆದಿದೆ. ಕೋಲಾರ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಇಂದು ಬಂಗಾರಪೇಟೆ  ಪಟ್ಟಣವನ್ನ ಬಂದ್ ಮಾಡಲಾಗಿದೆ.

ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಭುಗಿಲೆದ್ದಿದ್ದು . ಇಂದು ಬಂಗಾರಪೇಟೆ ಬಂದ್‌ಗೆ ಬೆಂಬಲಿಗರು ಹಾಗೂ ಕಾರ್ಯಕರ್ತರು ಕರೆ ನೀಡಿವೆ. ತುರ್ತು ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಿದ್ದು ಅಂಗಡಿಮುಂಗಟ್ಟುಗಳು ಮುಚ್ಚಿವೆ.

ಸಚಿವ ಸಂಪುಟ ವಿಸ್ತರಣೆ ವೇಳೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗದಿದ್ದಕ್ಕೆ ಶಾಸಕರು  ಮತ್ತು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶದ ಜ್ವಾಲೆ  ಹೆಚ್ಚಾಗಿದೆ.

Key words: ministerial Post, Bangarpet, bandh, today