ಮಂತ್ರಿಗಳು ಪರ್ಸೆಂಟೇಜ್ ಕೇಳುತ್ತಿದ್ದಾರಂತೆ: ಕಾಂಗ್ರೆಸ್ ನಿಂದ ವಸೂಲಿ ಮುಂದುವರಿಕೆ – ಮಾಜಿ ಸಿಎಂ ಹೆಚ್.ಡಿಕೆ ವಾಗ್ದಾಳಿ.

ಬೆಂಗಳೂರು,ಆಗಸ್ಟ್,4,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಮಿಷನ್ ಆರೋಪ ಮಾಡಿದ್ದಾರೆ.

ಗುತ್ತಿಗೆದಾರರಿಗೆ ಪರ್ಸೆಂಟೇಜ್ ನಿಗದಿ ಮಾಡಿದ್ದಾರೆ. ವಸೂಲಿ ಕೆಲಸವನ್ನ ಕಾಂಗ್ರೆಸ್ ಮುಂದುವರೆಸಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾನು ಯೂರೋಪ್ ಪ್ರವಾಸದಲ್ಲಿದ್ದಾಗಲೇ ಕಮಿಷನ್ ಬಗ್ಗೆ ಮಾಹಿತಿ ಬಂತು ಬೆಂಗಳೂರಿನಲ್ಲಿ ಪರ್ಸೆಂಟೇಜ್  ಕೇಳುತ್ತಿದ್ದಾರಂತೆ ಮಂತ್ರಿಗಳು ಮಂತ್ರಿಗಳ ಚೇಲಾಗಳು ಪರ್ಸೆಂಟೇಜ್ ಕೇಳುತ್ತಿದ್ದಾರಂತೆ. ಇಂತವರು ರಾಹುಲ್ ಗಾಂಧಿ ಮುಂದೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುತ್ತಾರಂತೆ. ಹೊರ ನೋಟಕ್ಕೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎನ್ನುತ್ತಾರೆ.  ಸ್ವಾತಂತ್ರ ಬಂದಾಗಿನಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಂದಿನಿಂದಲೂ ಕಾಂಗ್ರೆಸ್ ವಸೂಲಿಗಾಗಿಯೇ ಇದೆ. ಈಸ್ಟ್ ಇಂಡಿಯಾ ಕಂಪನಿ ದೇಶ ಬಿಟ್ಟು ಹೋಗಿದೆ ಕಾಂಗ್ರೆಸ್ ಗೆ ಅಧಿಕಾರ ನೀಡಿ ಹೋಗಿದೆ. ಈ ಕಾಂಗ್ರೆಸ್ ನವರು ಭ್ರಷ್ಟಾಚಾರ ನಿಲ್ಲಿಸುತ್ತಾರಾ..? ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ನಡೆದಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ​ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಾವು ಕುಟುಂಬ ಸಮೇತ ಪ್ರವಾಸ ಹೋಗಿದ್ದು ಯುರೋಪ್​ಗೆ ಆದ್ರೆ, ಸರ್ಕಾರ ಕೆಡವಲು ಹೋಗಿದ್ದೇವೆ ಎಂಬ ರೀತಿ ಬಿಂಬಿಸಲಾಗಿದೆ. 19 ಸ್ಥಾನ ಗೆದ್ದ ನಮ್ಮ ಬಗ್ಗೆ ಎಷ್ಟು ಭಯ ಇದೆ ಎಂದು ಅವರ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದರು.

Key words: Ministers – percentage-Continuation – collection – Congress- Former CM -HDK