ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಪುಂಡಾಟ ಮೆರೆದ  ಕಿಡಿಗೇಡಿಗಳು.

ಬೆಳಗಾವಿ, ಜನವರಿ,1,2024(www.justkannada.in):  ಹೊಸ ವರ್ಷದ  ಸಂಭ್ರಮದಲ್ಲಿರುವಾಗಲೇ ಇತ್ತ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ.

ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಈ ಘಟನೆ ನಡೆದಿದೆ. ಇಲ್ಲಿ ಕಟ್ಟಿದ್ದ ನಾಡಧ್ವಜಕ್ಕೆ ರಾತ್ರೋರಾತ್ರಿ  ದುಷ್ಕರ್ಮಿಗಳು ಬೆಂಕಿ ಹಚ್ಚಿ ಕಿಡಿಗೇಡಿತನವನ್ನ ಪ್ರದರ್ಶಿಸಿದ್ದಾರೆ.  ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದು,  ಕೂಡಲೇ  ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನ ಬಂಧಿಸುವಂತೆ  ಆಗ್ರಹಿಸಿದ್ದಾರೆ.

Key words:  miscreants – Kannada flag –fire-Belguam