ಬೆಂಗಳೂರು,ಡಿಸೆಂಬರ್,23,2025 (www.justkannada.in): ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಬಂಧನ ಭೀತಿಯಲ್ಲಿದ್ದ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ತಲೆಮರಿಸಿಕೊಂಡಿರುವ ಶಾಸಕ ಭೈರತಿ ಬಸವರಾಜು ಬಂಧನಕ್ಕೆ ಸಿಐಡಿ ಪೊಲೀಸರು 3 ವಿಶೇಷ ತಂಡಗಳನ್ನ ರಚನೆ ಮಾಡಿ ಬಲೆ ಬೀಸಿದ್ದಾರೆ. ಯಾವುದೇ ಕ್ಷಣದಲ್ಲಿ ಭೈರತಿ ಬಸವರಾಜು ಬಂಧನ ಸಾಧ್ಯತೆ ಇದೆ.
Key words: MLA, Bhairati Basavaraju, bail plea, dismissed, arrest, threatened







