ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜು ಬಂಧನವಾಗಿತ್ತು. ಜಾಮೀನು ಕೋರಿ ಭೈರತಿ ಬಸವರಾಜು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
2 ಲಕ್ಷ ರೂ. ಬಾಂಡ್, ಇಬ್ಬರು ಶೂರಿಟಿ ನೀಡುವಂತೆ ಸೂಚನೆ ನೀಡಿದೆ. ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ. ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ಕೋರ್ಟ್ ಅನುಮತಿಯಲ್ಲಿದೆ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂದು ಷರತ್ತು ವಿಧಿಸಿದೆ.
Key words: MLA, Bhairati Basavaraju, granted, conditional bail







