ನಿಮಗೆ ತಾಕತ್ ಇದ್ರೆ ದಾಖಲೆ ಕೊಡಿ- ಆರ್ ಎಸ್ ಎಸ್ ಗೆ ಶಾಸಕ ಪ್ರದೀಪ್ ಈಶ್ವರ್ ಸವಾಲು

ರಾಮನಗರ,ಜೂನ್,16,2026 (www.justkannada.in): ಆರ್ ಎಸ್ ಎಸ್ ನೋಂದಣಿ ಬಗ್ಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನೋಂದಣಿ ಕಾಪಿ ಕೊಡಿ ಅಂತಾ ನಾವು ಕೇಳ್ತಿರೋದು. ಆರ್ ಎಸ್ ಎಸ್ ದಾಖಲೆ ಕೇಳಿದ್ದಕ್ಕೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ನಿಮಗೆ ತಾಕತ್  ಇದ್ರೆ ದಾಖಲೆ ಕೊಡಿ ಎಂದು ಸವಾಲು ಹಾಕಿದರು.

ಸಂಘ ಇದೆ ಟ್ಯಾಕ್ಸ್ ಕಟ್ಟುವುದಿಲ್ಲ ಅಂದರೆ ಯಾವ ಲೆಕ್ಕ? ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನಮ್ಮ ಸಪೋರ್ಟ್ ಇದೆ ಎಂದು ಶಾಸಕ  ಪ್ರದೀಪ್ ಈಶ್ವರ್ ತಿಳಿಸಿದರು.

Key words: MLA, Pradeep Eshwar, challenges, RSS