Wednesday, August 5, 2026

BDA Apartments

Home Front Page ಹೆಚ್ ಡಿಡಿ ಭಾವನಾತ್ಮಕ ಮಾತು: ನೀರಾವರಿ ಯೋಜನೆಗಳನ್ನ ಜಾರಿ ಮಾಡಿಸಿದ್ರೆ ಸಂತಸ-ಶಾಸಕ ಶಿವಲಿಂಗೇಗೌಡ

ಹೆಚ್ ಡಿಡಿ ಭಾವನಾತ್ಮಕ ಮಾತು: ನೀರಾವರಿ ಯೋಜನೆಗಳನ್ನ ಜಾರಿ ಮಾಡಿಸಿದ್ರೆ ಸಂತಸ-ಶಾಸಕ ಶಿವಲಿಂಗೇಗೌಡ

ಬೆಂಗಳೂರು,ಫೆಬ್ರವರಿ,5,2026 (www.justkannada.in):  ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಕೇಳಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ, ರಾಜ್ಯದ ನೀರಾವರಿ ಯೋಜನೆಗಳನ್ನ ಜಾರಿ ಮಾಡಿಸಿದರೆ ಸಂತಸವಾಗುತ್ತೆ ಎಂದಿದ್ದಾರೆ.

ಇಂದು ಮಾತನಾಡಿದ ಶಾಸಕ ಶಿವಲಿಂಗೇಗೌಡ, ಹೆಚ್ ಡಿ ದೇವೇಗೌಡರು ಭಾವನಾತ್ಮಕವಾಗಿ ಮಾತನಾಡಿದ್ದಾರೆ. ರಾಜ್ಯದ ನೀರಾವರಿ ಯೋಜನೆ ಬಗ್ಗೆ ಮಾತಾಡಿದ್ದನ್ನ ಸ್ವಾಗತಿಸುವೆ. ಹೆಚ್ ಡಿ ದೇವೇಗೌಡರು ಆಡಳಿತ ಪಕ್ಷದ ಜೊತೆ ಮೈತ್ರಿಯಲ್ಲಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಮಾತನಾಡಿ ನೀರಾವರಿ ಯೋಜನೆಗಳಿಗೆ ಅನುಮತಿ ಕೊಡಿಸಬೇಕು ರಾಜ್ಯದ ನೀರಾವರಿ ಯೋಜನೆಗಳನ್ನ ಜಾರಿ ಮಾಡಿಸಿದರೆ ಸಂತಸವಾಗುತ್ತದೆ ಎಂದರು.

ನಿನ್ನೆ ವಿಧಾನಸಭೆ ಕಲಾಪದಲ್ಲಿ ವಿಪಕ್ಷ ಬಿಜೆಪಿ ವಿರುದ್ದ ಏಕವಚನದಲ್ಲಿ ಮಾತನಾಡಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಶಿವಲಿಂಗೇಗೌಡ, ನಿನ್ನೆ ಸದನದಲ್ಲಿ ಅಹಿತಕರ ಘಟನೆ ನಡೆಯಿತು. ವಿಪಕ್ಷ ಸದಸ್ಯರು ಪ್ರತಿಭಟನೆ ಮಾಡುತಿದ್ದರು. ಈ ವೇಳೆ ನನಗೆ ಮಾತನಾಡಲು ಅವಕಾಶ ಕೊಟ್ಟರು. ಆಗ ನನ್ನ ಮೇಲೆ ವೈಯಕ್ತಿಕ ನಿಂದನೆ ಮಾಡಿದರು.  ಹಾಗಾಗಿ ಬಿರುಸಿನಿಂದ ಮಾತನಾಡಿದೆ ಎಂದು ಸ್ಪಷ್ಟಪಡಿಸಿದರು.

Key words: Former PM, HD Devegowda, emotional speech, MLA, Shivalingegowda