Friday, August 14, 2026

BDA Apartments

Home Front Page ಹಿಜಾಬ್ ಗೆ ಅವಕಾಶ : ಉಪಚುನಾವಣೆಯ ನೋವು ಮರೆಯಲು ಮುಸ್ಲೀಮರ ತುಷ್ಟೀಕರಣ-ಶಾಸಕ ಸುನೀಲ್ ಕುಮಾರ್

ಹಿಜಾಬ್ ಗೆ ಅವಕಾಶ : ಉಪಚುನಾವಣೆಯ ನೋವು ಮರೆಯಲು ಮುಸ್ಲೀಮರ ತುಷ್ಟೀಕರಣ-ಶಾಸಕ ಸುನೀಲ್ ಕುಮಾರ್

ಬೆಂಗಳೂರು,ಮೇ,14,2026 (www.justkannada.in): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕೆಂಡ ಕಾರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಕಾಂಗ್ರೆಸ್ ಸರ್ಕಾರದಿಂದ ಹಿಂದೂ ವಿರೋಧಿ ನೀತಿ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ.  ನ್ಯಾಯಾಂಗ ನಿಂಧನೆಯೂ ಹೌದು. ದಾವಣಗೆರೆ ಉಪಚುನಾವಣೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯ  ಕಾಂಗ್ರೆಸ್ ಗೆ ಕೊಟ್ಟ ಕಪಾಳಮೋಕ್ಷದ ನೋವನ್ನ ಮರೆಯುವುದಕ್ಕಾಗಿ ಸಿದ್ದರಾಮಯ್ಯ  ಸರ್ಕಾರ ಈಗ ಮುಸ್ಲೀಂ ತುಷ್ಟೀಕರಣ ಮಾಡುತ್ತಿದೆ ಎಂದು ಲೇವಡಿ ಮಾಡಿದರು.

ಕಳೆದ ಬಾರಿ ಕ್ಯಾಬಿನೆಟ್ ಸಭೆಯಲ್ಲಿ ಮುಸ್ಲೀಂ ಕಾಲೋನಿಗಳ ಅಭಿವೃದ್ದಿಗೆ ಕೋಟ್ಯಾಂತರ ರೂ. ಅನುದಾನ ಕೊಡಲಾಗಿತ್ತು. ಅದರ ಬೆನ್ನಲ್ಲೆ ಈಗ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ತನ್ನ ಮತಬ್ಯಾಕ್ ಭದ್ರಪಡಿಸಿಕೊಳ್ಳುವುದಕ್ಕಾಗಿ ದೇಶದ ಸಮಗ್ರತೆ ಸಂವಿಧಾನವನ್ನು ಒತ್ತೆ ಇಡುವುದಕ್ಕೆ ಹೇಸದ ಕಾಂಗ್ರೆಸ್ಸಿಗರಿಗೆ ಈಗ ಮತ್ತೆ ಬಿಜಾಬ್ ಧ್ಯಾನ ಶುರುವಾಗಿದೆ ಎಂದು ಶಾಸಕ ಸುನೀಲ್ ಕುಮಾರ್ ಕಿಡಿಕಾರಿದರು.

Key words: Hijab, Appeasement, Muslims, MLA, Sunil Kumar