ಮೈಸೂರು,ಅಕ್ಟೋಬರ್,25,2025 (www.justkannada.in): ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿ ಯಾವ ಕ್ರಾಂತಿಯೂ ಇಲ್ಲ. 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.
ನಾಯಕತ್ವ ವಿಚಾರವಾಗಿ ಹೇಳಿದ ಮಾತಿಗೆ ಈಗಲೂ ಬದ್ದ. ನನ್ನ ಹೇಳಿಕೆಗೆ ನಾನು ಸ್ಪಷ್ಟೀಕರಣ ಕೂಡ ಕೊಟ್ಟಿದ್ದೇನೆ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಉತ್ತರ ಕೊಡುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
Key words: leadership, Statement, MLC, Yathindra Siddaramaiah







