ಜುಲೈ 20 ರಿಂದ ಆಗಸ್ಟ್ 11ರವರೆಗೆ ಸಂಸತ್ ಮುಂಗಾರು ಅಧಿವೇಶನ

ಬೆಂಗಳೂರು, ಜುಲೈ 02, 2023 (www.justkannada.in): ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ.

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನದಲ್ಲಿ ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಮಾಡುವ ಸಾಧ್ಯತೆ ಇದೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಸೇರಿದಂತೆ ಕೆಲವೊಂದು ಮಸೂದೆಗಳನ್ನು ಮಂಡಿಸಲು ಮೋದಿ ಸರಕಾರ ಸಿದ್ಧತೆ ನಡೆಸಿದೆ.

ಈ ನಡುವೆ ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷಗಳು, ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಂಡನೆಗೆ ವಿರೋಧ ವ್ಯಕ್ತಪಡಿಸಲು ಸಿದ್ಧತೆ ನಡೆಸಿವೆ.