ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಸುಗಮ ಕಲಾಪಕ್ಕೆ ಮನವಿ ಮಾಡಿದ ಪ್ರಧಾನಿ ಮೋದಿ.

ನವದೆಹಲಿ,ಜುಲೈ,20,2023(www.justkannada.in): ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಸುಗಮ ಕಲಾಪ ನಡೆಯಲು ಸಹಕಾರ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.

ಸಂಸತ್ ಭವನದ ಬಳಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸುಗಮ ಕಲಾಪ ನಡೆಯಲು ವಿಪಕ್ಷಗಳು ಸಹಕಾರ ನೀಡಬೇಕು. ಈ ಬಾರಿ ಸುಗಮವಾಗಿ ಕಲಾಪ ನಡೆಯುವ ವಿಶ್ವಾಸವಿದೆ.  ಎಲ್ಲಾ ವಿಚಾರಗಳ ಬಗ್ಗೆಯೂ ಮುಕ್ತ ಚರ್ಚೆಗೆ ಅವಕಾಶವಿದೆ. ಸುಗಮ ಕಲಾಪಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.

Key words: Monsoon session – Parliament- starts – today-PM-Modi