Friday, September 11, 2026

BDA Apartments

Home Crime ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು

ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು

ಹಾವೇರಿ,ಅಕ್ಟೋಬರ್,20,2025 (www.justkannada.in):  ಕೌಟುಂಬಿಕ ಕಲಹಕ್ಕೆ ಬೇಸತ್ತು ವರದಾ ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ವರದಹಳ್ಳಿ ಸಮೀಪ ಒಂದು ಘಟನೆ ನಡೆದಿದೆ.

ಹಾವೇರಿ ತಾಲೂಕಿನ ವರದಹಳ್ಳಿಯಲ್ಲಿ ತಾಯಿ ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಕಾವ್ಯ (12) ಆತ್ಮಹತ್ಯೆಗೆ ಶರಣಾದವರು.  ಕೌಟುಂಬಿಕ ಕಲಹ ಹಾಗೂ ವರದಕ್ಷಣೆ ಕಿರುಕುಳ ಹಿನ್ನೆಲೆ ಮಗಳ ಜೊತೆಗೆ ವರದಾ ನದಿಗೆ ಹಾರಿ ತಾಯಿ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ದೌಡಾಯಿಸಿ ಕಾವ್ಯ ಮೃತ ದೇಹವನ್ನು ಪತ್ತೆ ಮಾಡಿದ್ದು, ಸವಿತಾ ಮೃತ ದೇಹಕ್ಕಾಗಿ ಶೋಧ ಮುಂದುವರಿಸಿದ್ದಾರೆ. ವರದ ನದಿ ದಡದಲ್ಲಿ ಸವಿತಾ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mother, daughter, committed, suicide