ಮಕ್ಕಳಿಗೆ ವಿಷಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ: ಓರ್ವ ಮಗು ಸಾವು.

ಚಾಮರಾಜನಗರ,ಜುಲೈ,12,2023(www.justkannada.in): ಕೌಟುಂಬಿಕ ಕಲಹ ಹಿನ್ನೆಲೆ ಮಕ್ಕಳಿಗೆ ವಿಷಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಓರ್ವ ಮಗು ಸಾವನ್ನಪ್ಪಿದೆ.

ಮಧುವನಹಳ್ಳಿ ಗ್ರಾಮದ ಶೀಲಾ ತನ್ನ ಮಕ್ಕಳು ಯಶ್ವಂತ್ ಮತ್ತು ಸಿಂಧುಗೆ ವಿಷಕುಡಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆರು ವರ್ಷದ ಸಿಂಧು ಮೃತಪಟ್ಟಿದ್ದಾಳೆ. ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆಯಲ್ಲಿ ತಾಯಿ ಶೀಲ ಹಾಗೂ ಮಗು ಯಶವಂತ್​ ಚಿಕಿತ್ಸೆ ಮುಂದುವರೆದಿದೆ.

ಪ್ರತಿದಿನ ಕುಡಿದು ಬಂದು ಪತ್ನಿ ಶೀಲ ಜೊತೆಗೆ ಪತಿ ಜಗಳವಾಡುತ್ತಿದ್ದ. ಇದರಿಂದ  ಮನನೊಂದು ಮಕ್ಕಳಿಗೆ ವಿಷ ಕುಡಿಸಿ ತಾಯಿ ಶೀಲ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: Mother -tries – commit suicide – poisoning –children