ಬಿವೈ ವಿಜಯೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಕೆ ನೂರಕ್ಕೆ ನೂರು ಸತ್ಯ- ಎಂ.ಪಿ ರೇಣುಕಾಚಾರ್ಯ

ಬೆಂಗಳೂರು,ಜೂನ್,26,2025 (www.justkannada.in): ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಸೇರಿ 6 ರಾಜ್ಯಗಳ ರಾಜ್ಯಾಧ್ಯಕ್ಷರ ನೇಮಕ ಮಾಡುವ ಬಗ್ಗೆ ವರದಿಯಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ಬಿವೈ ವಿಜಯೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಕೆ ನೂರಕ್ಕೆ ನೂರು ಸತ್ಯ ಎಂದಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಎಂ.ಪಿ ರೇಣುಕಾಚಾರ್ಯ,  ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೂರಕ್ಕೆ ನೂರು ಮುಂದುವರೆಯುತ್ತಾರೆ. ಬಿಜೆಪಿ ವರಿಷ್ಠರು ಬಿವೈ ವಿಜಯೇಂದ್ರ ಸಾಮರ್ಥ್ಯ ನೋಡಿದ್ದಾರೆ.  ಬಿವೈ ವಿಜಯೇಂದ್ರ ಸಾಮರ್ಥ್ಯ ನೋಡಿ ವರಿಷ್ಠರು ಸ್ಥಾನ ನೀಡಿದ್ದಾರೆ.  ಮೋದಿ, ಅಮಿತ್ ಶಾ ಸ್ಥಾನ ನೀಡಿದ್ದಾರೆ.  ನಮಗೆ ವಿಶ್ವಾಸವಿದೆ ಎಂದಿದ್ದಾರೆ.

ಇನ್ನು ಬಹಿರಂಗ ಹೇಳಿಕೆ ಬೇಡ ಎಂದು ಬಿಎಸ್ ವೈ ಹೇಳಿದ್ದಾರೆ . ಹೀಗಾಗಿ ಮಾತಾಡಲ್ಲ ಎಂದು ಎಂಪಿ ರೇಣುಕಾಚಾರ್ಯ ತಿಳಿಸಿದರು.

vtu

Key words: BY Vijayendra,  continuation, BJP state president,  MP Renukacharya