ಈ ರಾಜ್ಯಕ್ಕೆ ಸಿಎಂ ಆಗ್ತಿರಾ, ಅಂತ ಜನಾಂಗಕ್ಕೆ ಮೀಸಲಾತಿ ಕೊಡಬೇಕಾ…? ಮೀಸಲಾತಿ ಕೇಳಿದವರ ವಿರುದ್ದ ಸಿಡಿದೆದ್ದ ಸಂಸದ ಶ್ರೀನಿವಾಸ್ ಪ್ರಸಾದ್….

ಮೈಸೂರು,ಮಾರ್ಚ್,2,2021(www.justkannada.in):  ಮೀಸಲಾತಿ ನೀಡುವಂತೆ ಆಗ್ರಹಿಸಿ ಕುರುಬ ಸಮುದಾಯ, ಪಂಚಮಸಾಲಿ ಸಮುದಾಯ ಸರ್ಕಾರಕ್ಕೆ ಪಟ್ಟು ಹಿಡಿದಿದ್ದು ಮೀಸಲಾತಿ ಕೇಳುತ್ತಿರುವವರ ವಿರುದ್ದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸಿಡಿದೆದ್ದಿದ್ದಾರೆ.jk

ಮೀಸಲಾತಿ ಕೇಳಲು ನಿಮಗೆ ನಾಚಿಕೆಯಾಗೋಲ್ಲ. 10 ಕೋಟಿ ಕೊಟ್ಟು ಹೆಲಿಕ್ಯಾಪ್ಟರ್ ತಗೊಳೋರು ಮಿಸಲಾತಿ ಕೇಳ್ತೀರಾ?. ಈ ರಾಜ್ಯಕ್ಕೆ ಸಿಎಂ ಆಗ್ತಿರಾ, ಅಂತ ಜನಾಂಗಕ್ಕೆ ಮೀಸಲಾತಿ ಕೊಡಬೇಕಾ…? ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ.

ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್,  ಮೈಮೇಲೆ ಬಟ್ಟೆ ಇಲ್ಲದವರು ಮೀಸಲಾತಿ ಕೇಳಲಿ. ಆನೆ ಮೇಯಿಸಿಕೊಂಡು ಕಾಡಲ್ಲಿ ಇರೋರು ಕೇಳಿದ್ರೆ ಅದನ್ನ ಒಪ್ಪೋಣ. ದೊಡ್ಡ ದೊಡ್ಡ ಬಿಸನಸ್‌ಮ್ಯಾನ್‌ ಗಳು, ಉಪಮುಖ್ಯಮಂತ್ರಿಗಳಾಗಿದ್ದೀರಿ. ರಿಯಲ್ ಎಸ್ಟೇಟ್ ಮಾಡುವವರಿಗೆ ಮೀಸಲಾತಿ ಕೊಡಬೇಕಾ..? ಎಂದು ಹರಿಹಾಯ್ದರು.

ಕುಳಿತಿರುವ ಜಾಗದಲ್ಲಿ 2Aಗೆ ಸೇರಿಸಲು ಆಗುತ್ತಾ…?

ಆ..ಎಂಟಿಬಿ 10 ಕೋಟಿ ಕೊಟ್ಟು ಹೆಲಿಕ್ಯಾಪ್ಟರ್ ತಗೋಳೋಕೆ ಆಗುತ್ತೆ. ಇಂತವರೇಲ್ಲ ಮೀಸಲಾತಿ ಕೇಳ್ತಿರಾ.? ಅದ್ಯಾರೋ 2A ಗೆ ಸೇರಿಸಿ ಅಂತಾರೆ. ಕುಳಿತಿರುವ ಜಾಗದಲ್ಲಿ 2Aಗೆ ಸೇರಿಸಲು ಆಗುತ್ತಾ. ಇವೆಲ್ಲದರ ಬಗ್ಗೆ ಸರ್ಕಾರ ಸ್ಪಷ್ಟವಾದ ಹೇಳಿಕೆ ಕೊಡಬೇಕು. ಸಿಎಂ ಹಾಗೂ ಕಾನೂನು ಸಚಿವರು ಇದನ್ನ ಸ್ಪಷ್ಟಪಡಿಸಬೇಕು. ಒಂದೇ ಹೇಳಿಕೆಯಲ್ಲಿ ಎಲ್ಲವನ್ನು ಮುಗಿಸಬೇಕು‌. ನಮ್ಮ ಇತಿ ಮಿತಿ ಏನಿದೆ ಅಂತ ಹೇಳಿಕೆ ಕೊಟ್ಟ ಮುಗಿಸಬೇಕು. ನಾನು ಈ ವಿಚಾರವನ್ನ ಸೂಕ್ಮವಾಗಿ ಹೇಳಿಕೆ ಕೊಡ್ತಿದ್ದೀನಿ. ಯಾರನ್ನ 2A ಸೇರಿಸುತ್ತಿದ್ದೀರಾ, ಹಾಗಾದ್ರೆ 2A ನಲ್ಲಿ ಇರೋರು ಎಲ್ಲಿಗೆ ಹೋಗಬೇಕು. 50% ಗಿಂತ ಜಾಸ್ತಿ ಇರಬಾರದು ಅಂತ ಸುಪ್ರೀಂಕೋರ್ಟ್ ಹೇಳಿದೆ. ಇದನ್ನ ಮುಂದುವರೆಸಬಾರದು ಎಂದು ಶ್ರೀನಿವಾಸ್ ಪ್ರಸಾದ್ ಸಲಹೆ ನೀಡಿದರು.

ಯಾರ್ರೀ ಅದು ಈಶ್ವರಪ್ಪ, ವಿಶ್ವನಾಥ್…

ಇದೇ ವೇಳೆ ಸಚಿವ ಈಶ್ವರಪ್ಪ ಮತ್ತು ಹೆಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿದ ಶ್ರೀನಿವಾಸ್ ಪ್ರಸಾದ್, ಯಾರ್ರೀ ಅದು ಈಶ್ವರಪ್ಪ ವಿಶ್ವನಾಥ್. ಯಾವುದೋ ವೇದಿಕೆ ಮೇಲೆ ನಿಂತ್ಕೊಂಡು ಜನ ಸೇರಿಸಿ ಮೀಸಲಾತಿ ಕೇಳೋಕೆ ಆಗುತ್ತಾ…? ಆ ವಿಶ್ವನಾಥ್ ದೇಶಕ್ಕೆಲ್ಲ ಮಾತನಾಡ್ತಾನೆ ಅವನಿಗೆ ಗೊತ್ತಾಗೋಲ್ವಾ. ಬೀದಿಯಲ್ಲಿ ನಿಂತು ಮೀಸಲಾತಿ ಬಗ್ಗೆ  ಮಾತನಾಡೋದಲ್ಲ ಎಂದು ಕುಟುಕಿದರು.mp-srinivas-prasad-against-reservation-outrage

ಮೀಸಲಾತಿಗೆ ಬಗ್ಗೆ ನಾನು ಮಾತನಾಡುವಾಗ ಸರಿಯಾಗಿ ಉತ್ತರ ಕೊಡಬೇಕು. ಸುಧಿರ್ಘವಾಗಿ ರಾಜಕಾರಣ ಮಾಡಿರುವವನು ನಾನು. ಮೀಸಲಾತಿ ಪ್ರಶ್ನೆ ಕೇಂದ್ರದ ಮುಂದೆ ಇರುತ್ತೆ. ಎಸ್‌ಟಿಗೆ ಕೊಡಬೇಕೋ ಬೇಡ್ವೋ ಅನ್ನೋದನ್ನ ಕೇಂದ್ರ ತೀರ್ಮಾನ ಮಾಡುತ್ತೆ‌. ರಾಜ್ಯ ಸರ್ಕಾರ ಶಿಫಾರಸ್ಸು ಮಾತ್ರ ಮಾಡಬೇಕು. ತಜ್ಞರ ಸಮಿತಿ ನೇಮಕ ಮಾಡಬೇಕು. ಇದನ್ನ ಮಾಡಿದವರು ಹಾವಲೂರು ಒಬ್ಬರೇ. ನಾಯಕ ಸಮಾಜಕ್ಕೆ ಎಸ್.ಟಿ.ಸೇರಿಸಲು ಕಾನೂನು ರೀತಿಯಲ್ಲಿ ಹೋರಾಟ ಮಾಡಿದ್ರು. ಆದ್ರೆ ಇವರುಗಳು ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words: MP- Srinivas Prasad- against – Reservation-outrage