ಬೆಂಗಳೂರು,ಮಾರ್ಚ್,26,2026 (www.justkannada.in): ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿರಿಪೋರ್ಟ್ ಅಂಗೀಕರಿಸಿದ ಕೋರ್ಟ್ ಆದೇಶ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.
ಅಲ್ಲದೆ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜುನಸ್ವಾಮಿ ದೇವರಾಜುಗೂ ನೋಟಿಸ್ ಜಾರಿಗೆ ಆದೇಶಿಸಿದೆ. ಪ್ರತಿವಾದಿಗಳಿಗೆ ನೋಟಸ್ ಜಾರಿಗೆ ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
Key words: Muda case, High Court, notice, CM Siddaramaiah, wife, Parvati







