Monday, August 3, 2026

BDA Apartments

Home Front Page ಸಿ.ಎಸ್ ನಾಡಗೌಡಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಮುದ್ದೇಬಿಹಾಳ ಬಂದ್

ಸಿ.ಎಸ್ ನಾಡಗೌಡಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಮುದ್ದೇಬಿಹಾಳ ಬಂದ್

ವಿಜಯಪುರ,ಜೂನ್,19,2026 (www.justkannada.in): ಶಾಸಕ ಸಿ.ಎಸ್ ನಾಡಗೌಡರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ  ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ಬಂದ್ ಮಾಡಲಾಗಿದೆ.

ಶಾಸಕ ಸಿ.ಎಸ್ ನಾಡಗೌಡರ ಬೆಂಬಲಿಗರು ಮುದ್ದೆಬಿಹಾಳ ಬಂದ್ ಕರೆ ನೀಡಿದ್ದು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುದ್ದೆಬಿಹಾಳದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಬಸ್ ಸೇವೇ ಸೇರಿದಂತೆ ಖಾಸಗಿ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.

ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕೆ ಶಾಸಕರ ಲಾಬಿ ತೀವ್ರಗೊಂಡಿದ್ದು ದೆಹಲಿಯ ಪಕ್ಷದ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಒತ್ತಡ ಹೇರುತ್ತಿದ್ದಾರೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಯಾರಿಗೆ ಮಂತ್ರಿಗಿರಿ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

Key words: Muddebihal bandh, demanding, C.S. Nadagowda, ministerial post