ಏಷಿಯನ್ ಪೇಂಟ್ಸ್ ಕಾರ್ಖಾನೆಯಲ್ಲಿ ರೈತರ ಮಕ್ಕಳಿಗೆ ಕೆಲಸ ಕೊಡಿಸುವಂತೆ ಒತ್ತಾಯಿಸಿ ಪ್ರತಿಭಟನೆ…

ಮೈಸೂರು, ನವೆಂಬರ್,3,2020(www.justkannada.in):  ಏಷಿಯನ್ ಪೇಂಟ್ಸ್ ಕಾರ್ಖಾನೆಯಲ್ಲಿ ರೈತರ ಮಕ್ಕಳಿಗೆ ಕೆಲಸ ಕೊಡಿಸುವಂತೆ ಒತ್ತಾಯಿಸಿ ಏಷಿಯನ್ ಪೇಂಟ್ಸ್ ಮತ್ತು ಜಿಲ್ಲಾಡಳಿತ ವಿರುದ್ಧ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. jk-logo-justkannada-logo

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ರೈತರು  ಏಷಿಯನ್ ಪೇಂಟ್ಸ್ ಕಾರ್ಖಾನೆ ಹಾಗೂ ಜಿಲ್ಲಾಡಳಿತದ ವಿರುದ್ಧ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಇದೇ ಕಾರ್ಖಾನೆಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಲಾಗಿತ್ತು. ಈ ಸಂಬಂಧ ಜಿಲ್ಲಾಡಳಿತ ಸಮನ್ವಯ ಸಭೆ ನಡೆಸಿ ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕಿತ್ತು. ಆದರೆ ಕಾರ್ಖಾನೆ ಅಧಿಕಾರಿಗಳ ಜೊತೆ ಸಭೆ ನಡೆಸಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿದೆ. ಈಗಾಗಲೇ ಜಿಲ್ಲಾಡಳಿತ ಮೂರು ಬಾರಿ ಸಭೆ ಮುಂದೂಡಿದೆ.mysore-Farmers'-protest-children –job-Asian Paints factory

ಇಂದೂ ಕೂಡಾ ಸಭೆ ನಡೆಸುತ್ತೇವೆಂದು ಹೇಳಿ ಮತ್ತೆ ಮುಂದೂಡಿದ್ದಾರೆ. ರೈತರ ಬಗ್ಗೆ ಜಿಲ್ಲಾಡಳಿತ ಪದೇಪದೇ ನಿರ್ಲಕ್ಷ್ಯ ವಹಿಸುತ್ತಿದೆ. ಕೂಡಲೇ ಈ ಸಂಬಂಧ ಜಿಲ್ಲಾಧಿಕಾರಿಗಳು ಸಭೆ ನಡೆಸಿ ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾನಿರತ ರೈತರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

Key words: mysore-Farmers’-protest-children –job-Asian Paints factory