Sunday, September 13, 2026

BDA Apartments

MYSORE FILM CITY: 3 ವರ್ಷದೊಳಗೆ ಕಾಮಗಾರಿ ಮುಗಿಸಿ, ಸಿಎಂ ಸಿದ್ದರಾಮಯ್ಯ ತಾಕೀತು BDA JK_Adv BDA Adv
Home Cinema MYSORE FILM CITY: 3 ವರ್ಷದೊಳಗೆ ಕಾಮಗಾರಿ ಮುಗಿಸಿ, ಸಿಎಂ ಸಿದ್ದರಾಮಯ್ಯ ತಾಕೀತು

MYSORE FILM CITY: 3 ವರ್ಷದೊಳಗೆ ಕಾಮಗಾರಿ ಮುಗಿಸಿ, ಸಿಎಂ ಸಿದ್ದರಾಮಯ್ಯ ತಾಕೀತು

MYSORE FILM CITY: CM SIDDARAMAIAH ASKS TO COMPLETE WORK WITHIN 3 YEARS

 

MYSORE FILM CITY VTU TOP BANNER 04

ಬೆಂಗಳೂರು, ಸೆ.30,2024: (www.justkannada.in news) ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ  ಹಸ್ತಾಂತರಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಮೈಸೂರು ಜಿಲ್ಲೆಯ ಇಮ್ಮಾ ವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಸೂಚನೆ ನೀಡಿದರು.

3 ವರ್ಷದೊಳಗೆ ಕಾಮಗಾರಿ ಮುಗಿಸಿ film theatre

ಸಭೆಯ ಮುಖ್ಯಾಂಶ…

ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್‌ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು.

ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ  ಮಾಡಲು ಟೆಂಡರ್‌ ಕರೆಯುವಂತೆ ಸೂಚಿಸಿದರು.

ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ  ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ, ಜಮೀನಿಗೆ ಕಾಂಪಾಂಡ್‌ ನಿರ್ಮಿಸಲು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.

ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.

ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರ ನಿರ್ಮಾಣವಾಗಬೇಕು ಎಂದು ಹೇಳಿದರು.

ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲು ಸೂಚನೆ ನೀಡಿದರು.

ಸರ್ಕಾರಕ್ಕೆ ಹೊರೆಯಾಗದಂತೆ ಚಿತ್ರನಗರಿ ನಿರ್ಮಾಣವಾಗಬೇಕು. ಚಿತ್ರನಗರಿ ಸ್ವರೂಪ ಕುರಿತಾಗಿ ಸಮಗ್ರವಾದ ವರದಿಯನ್ನು ಸಲ್ಲಿಸಲು ಸೂಚಿಸಿದರು.

ಚಿತ್ರ ನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಪ್ರಸ್ತಾವನೆಯನ್ನು ಸಲ್ಲಿಸಲು ಅವರು ಸೂಚನೆ ನೀಡಿದರು.

ಸಿಎಂ ಸಿದ್ದರಾಮಯ್ಯ ತಾಕೀತು filmcity

ಸಮಾಜ ಕಲ್ಯಾಣ  ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್‌, ಕಂದಾಯ ಸಚಿವ ಕೃಷ್ಣಭೈರೇಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್‌ ಚಂದ್ರ, ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

MYSORE FILM CITY: 3 ವರ್ಷದೊಳಗೆ ಕಾಮಗಾರಿ ಮುಗಿಸಿ TOP-BANNER-01 TOP BANNER 01

key words: MYSORE FILM CITY, CM SIDDARAMAIAH, ASKS TO COMPLETE, WORK WITHIN, 3 YEARS