ಕಪಿಲಾ ನದಿ ಪಕ್ಕದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಗ್ರಾಮಸ್ಥರಿಂದ ಪ್ರತಿಭಟನೆ…

ಮೈಸೂರು,ನವೆಂಬರ್,14,2020(www.justkannada.in):  ಕಪಿಲಾ ನದಿ ಪಕ್ಕದಲ್ಲೇ ಕುಡಿಯುವ ನೀರಿಗೆ ಹಾಹಾಕಾರ  ಉಂಟಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮಸ್ಥರು ಕುಡಿಯುವ ನೀರು ಬಿಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.kannada-journalist-media-fourth-estate-under-loss

ನಂಜನಗೂಡು ತಾಲ್ಲೂಕು ಪಂಚಾಯತಿ ಮುಂಭಾಗ ಜಮಾಯಿಸಿದ  ಗೋಳೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ವಾರಗಳಿಂದ ಗ್ರಾಮಸ್ಥರು ನೀರಿನ ಸಮಸ್ಯೆ ಎದುರಿಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಸಮಸ್ಯೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಈ ನಡುವೆ ಗ್ರಾಮದಲ್ಲಿ ವಾಟರ್ ಮ್ಯಾನ್ ಇದ್ದರೂ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಹೀಗಾಗಿ ಗ್ರಾಮದಲ್ಲಿ ನೀರಿನ ತೊಂದರೆ ಉಂಟಾಗಿದೆ. ದೀಪಾವಳಿ ಹಬ್ಬ ಸಮೀಸುತ್ತಿದ್ದು ಕೂಡಲೇ ನೀರು ಬಿಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Key words: mysore- Kapila River- Drinking water – Protest – villagers