ನಾವ್ಯಾರು ‘ಲಕ್ಶ್ಮಣ’ ರೇಖೆ ದಾಟುವ ಆಗಿಲ್ಲ: ಪಕ್ಷದ ಅಭ್ಯರ್ಥಿ ಪರ ಪ್ರಚಾರ- ‘ಕೈ’ಮುಖಂಡ ಶುಶ್ರುತ್ ಗೌಡ

ಮೈಸೂರು,ಮಾರ್ಚ್,23,2024(www.justkannada.in): ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಎಂ ಲಕ್ಷ್ಮಣ್ ಸಮರ್ಥ ಅಭ್ಯರ್ಥಿಯಾಗಿದ್ದು, ನಾವ್ಯಾರು ಲಕ್ಶ್ಮಣ ರೇಖೆ ದಾಟುವ ಆಗಿಲ್ಲ ಎಂದು ಕಾಂಗ್ರೆಸ್ ಮುಖಂಡ ಶುಶ್ರುತ್ ಗೌಡ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶುಶ್ರುತ್ ಗೌಡ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾವೆಲ್ಲರೂ ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದೆವು. ಅಂತಿಮವಾಗಿ ಪಕ್ಷ ಎಂ ಲಕ್ಷ್ಮಣ್ ಗೆ ಟಿಕೆಟ್ ನೀಡಿದೆ. ಲಕ್ಷ್ಮಣ್ ಜನರ ಮದ್ಯೆ ಇದ್ದು ಕೆಲಸ ಮಾಡುವ ನಾಯಕ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯಾಗಿ ಎಲ್ಲರು ನಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರೆ. ನಾವೆಲ್ಲರೂ ಒಗ್ಗಟ್ಟಿನಿಂದ ಪ್ರಚಾರ ಮಾಡುತ್ತೇವೆ. ಮನೆ ಮನೆಗೆ ತೆರಳಿ ಸರ್ಕಾರದ ಗ್ಯಾರಂಟಿ ಯೋಜನೆ ತಿಳಿಸುತ್ತೇವೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ಮೈಸೂರು ಕೊಡಗು ಕ್ಷೇತ್ರಕ್ಕೆ ಕೋಟ್ಯಾಂತರ ಅನುದಾನ ನೀಡಿದ್ದಾರೆ. ಇವೆಲ್ಲವೂ ನಮ್ಮ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗುತ್ತವೆ ಎಂದು ಕಾಂಗ್ರೆಸ್ ಮುಖಂಡ ಡಾ.ಶುಶ್ರುತ್ ಗೌಡ ಹೇಳಿದರು.

Key words: mysore-kodagu-congress-candidate-M.Laxman-shushruth gowda